1
|
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. |
2
|
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. |
3
|
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. |
4
|
ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ. |
5
|
ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು. |
6
|
ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು. |
7
|
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ. |
8
|
ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ. |
9
|
ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. |
10
|
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. |
11
|
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ |
12
|
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. |
13
|
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. |
14
|
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. |
15
|
ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. |
16
|
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ. |
17
|
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? |
18
|
ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ? |
19
|
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ. |
1 Peter 4:16 English Language Bible Words basic statistical display
COMING SOON ...