1
|
ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ. |
2
|
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ. |
3
|
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. |
4
|
ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. |
5
|
ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. |
6
|
ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. |
7
|
ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು. |
8
|
ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. |
9
|
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ. |
10
|
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ. |
11
|
ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ. |
12
|
ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ? |
13
|
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ. |
14
|
ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. |
15
|
ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. |
16
|
ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. |
17
|
ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. |
18
|
ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. |
19
|
ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. |
20
|
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು. |
21
|
ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. |
22
|
ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. |
23
|
ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು. |
24
|
ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು. |
25
|
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. |
26
|
ನಾಶವಾಗಲಿರುವ ಕಡೇ ಶತ್ರುವು ಮರಣ. |
27
|
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ. |
28
|
ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು. |
29
|
ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ? |
30
|
ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ? |
31
|
ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. |
32
|
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. |
33
|
ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ. |
34
|
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ. |
35
|
ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು. |
36
|
ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ. |
37
|
ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ. |
38
|
ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ. |
39
|
ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ. |
40
|
ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ. |
41
|
ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ. |
42
|
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. |
43
|
ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. |
44
|
ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. |
45
|
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. |
46
|
ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. |
47
|
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. |
48
|
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. |
49
|
ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. |
50
|
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. |
51
|
ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. |
52
|
ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. |
53
|
ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. |
54
|
ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. |
55
|
ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? |
56
|
ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. |
57
|
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ. |
58
|
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ. |
1-Corinthians 15:18 English Language Bible Words basic statistical display
COMING SOON ...