1
|
ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು. |
2
|
ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು. |
3
|
ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ-- |
4
|
ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ. |
5
|
ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ. |
6
|
ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ. |
7
|
ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ. |
8
|
ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು. |
9
|
ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು. |
10
|
ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು. |
11
|
ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. |
12
|
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ-- |
13
|
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. |
14
|
ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು. |
15
|
ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು |
16
|
ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. |
17
|
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ. |
18
|
ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ -- |
19
|
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ. |
20
|
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು. |
2-Kings 22:19 English Language Bible Words basic statistical display
COMING SOON ...