ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.