1
|
ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ? |
2
|
ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ. |
3
|
ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ. |
4
|
ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ. |
5
|
ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು. |
6
|
ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು. |
7
|
ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ; |
8
|
ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ. |
9
|
ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ. |
10
|
ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ. |
11
|
ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ. |
12
|
ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ? |
13
|
ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ. |
14
|
ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ. |
15
|
ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. |
16
|
ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. |
17
|
ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; |
18
|
ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. |
19
|
ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ. |
20
|
ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ? |
21
|
ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. |
22
|
ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ. |
23
|
ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ. |
24
|
ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ. |
25
|
ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ. |
26
|
ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ |
27
|
ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು. |
28
|
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ. |
Job 28:24 English Language Bible Words basic statistical display
COMING SOON ...