1
|
ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು. |
2
|
ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾಮ್ರಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು. |
3
|
ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು. |
4
|
ಜೆರುಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯಾರೆಂದರೆ: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ, |
5
|
ಇಬ್ಹಾರ್, ಎಲೀಷೂವ, ಎಲ್ಪೆಲೆಟ್, |
7
|
ಎಲೀಷಾಮಾ, ಬೇಲ್ಯಾದ ಮತ್ತು ಎಲೀಫೆಲೆಟ್. |
8
|
ದಾವೀದನು ಇಸ್ರೇಲರ ಅರಸನಾಗಿ ಆರಿಸಲ್ಪಟ್ಟಿದ್ದನ್ನು ಕೇಳಿ ಎಲ್ಲಾ ಫಿಲಿಷ್ಟಿಯರು ಅವನೊಂದಿಗೆ ಯುದ್ಧಮಾಡಲು ಬಂದರು. ದಾವೀದನು ಇದನ್ನು ಅರಿತು ಯುದ್ಧಸನ್ನದ್ಧನಾಗಿ ಫಿಲಿಷ್ಟಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟನು. |
9
|
ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರದನ್ನೆಲ್ಲಾ ದೋಚಿಕೊಂಡರು. |
10
|
ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು. |
11
|
ಆಗ ದಾವೀದನೂ ಅವನ ಸಂಗಡಿಗರೂ ಬಾಳ್ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. “ದೇವರು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ದಾವೀದನು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಾಯಿತು. |
12
|
ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ದಾವೀದನು ಅವುಗಳನ್ನೆಲ್ಲಾ ಒಟ್ಟುಸೇರಿಸಿ ಸುಡಿಸಿಬಿಟ್ಟನು. |
13
|
ಫಿಲಿಷ್ಟಿಯರು ಮತ್ತೆ ರೆಫಾಯೀಮ್ ತಗ್ಗಿನಲ್ಲಿ ವಾಸಮಾಡುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿದರು. |
14
|
ದಾವೀದನು ಮತ್ತೆ ಯೆಹೋವನಿಗೆ ಪ್ರಾರ್ಥಿಸಿ ವಿಚಾರಿಸಿದನು. ಯೆಹೋವನು ಅವನ ಪ್ರಾರ್ಥನೆಗೆ ಉತ್ತರಕೊಟ್ಟು, “ದಾವೀದನೇ, ಫಿಲಿಷ್ಟಿಯರನ್ನು ಬೆಟ್ಟದ ಮೇಲೆ ನೀನು ಹಿಂಬಾಲಿಸದಿರು. ಅವರ ಹಿಂದಿನಿಂದ ಹೋಗಿ ಬಾಲ್ಸಾಮ್ ಮರಗಳ ಹಿಂದೆ ಅವಿತುಕೊಂಡಿರು. |
15
|
ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು. |
16
|
ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು. |
17
|
ಹೀಗೆ ದಾವೀದನು ಎಲ್ಲಾ ದೇಶಗಳಲ್ಲಿ ಹೆಸರುವಾಸಿಯಾದನು. ಎಲ್ಲಾ ಜನಾಂಗಗಳವರು ಅವನಿಗೆ ಭಯಪಡುವಂತೆ ಯೆಹೋವನು ಮಾಡಿದನು. |
1-Chronicles 14:5 Kannada Language Bible Words basic statistical display
COMING SOON ...