1
|
ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು. |
2
|
ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ. |
3
|
ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು. |
4
|
ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. |
5
|
ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ. |
6
|
ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ. |
7
|
ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.” |
8
|
ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿ ಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು. |
9
|
ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆ ಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು. |
10
|
ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು. |
11
|
ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು. |
12
|
ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು. |
13
|
ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. 1 |
14
|
ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು. |
15
|
ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು. |
16
|
ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು. |
17
|
ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು. |
18
|
ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು. |
19
|
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ. |
20
|
ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು. |
2-Kings 16:3 Kannada Language Bible Words basic statistical display
COMING SOON ...