1
|
ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ. |
2
|
ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ. |
3
|
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ. |
4
|
ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ. |
5
|
ಈ ಸಂಗತಿಗಳೆಲ್ಲವೂ ಸಂಭವಿಸುತ್ತವೆಯೆಂದು ನಾನು ನಿಮಗೆ ಮೊದಲೇ ತಿಳಿಸಿದ್ದೇನೆ. ಜ್ಞಾಪಕವಿಲ್ಲವೇ? |
6
|
ಈಗ ಅಧರ್ಮಸ್ವರೂಪನನ್ನು ತಡೆಹಿಡಿದಿರುವುದು ಯಾವುದೆಂಬುದು ನಿಮಗೆ ತಿಳಿದಿದೆ. ಅವನು ತಕ್ಕಕಾಲದಲ್ಲಿ ಬರಲೆಂದೇ ಅವನನ್ನು ಈಗ ತಡೆಹಿಡಿಯಲಾಗಿದೆ. |
7
|
ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ |
8
|
ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು. |
9
|
ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ. |
10
|
ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.) |
11
|
ಆದರೆ ಆ ಜನರು ಸತ್ಯವನ್ನು ಪ್ರೀತಿಸಲಿಲ್ಲ. ಆದಕಾರಣ, ಸತ್ಯವನ್ನು ತೊರೆದು, ಸತ್ಯವಲ್ಲದ್ದನ್ನು ನಂಬುವಂತೆ ಮಾಡುವ ಶಕ್ತಿಯೊಂದನ್ನು ದೇವರು ಅವರ ಬಳಿಗೆ ಕಳುಹಿಸುತ್ತಾನೆ. |
12
|
ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು. |
13
|
ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ. |
14
|
ನೀವು ರಕ್ಷಣೆಯನ್ನು ಹೊಂದಿಕೊಂಡು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮಹಿಮೆಯಲ್ಲಿ ಪಾಲುಗಾರರಾಗಬೇಕೆಂದು, ನಾವು ಸಾರಿದ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಕರೆದನು. |
15
|
ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ. |
16
|
[This verse may not be a part of this translation] |
17
|
[This verse may not be a part of this translation] |
2-Thessalonians 2:4 Kannada Language Bible Words basic statistical display
COMING SOON ...