1
|
ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ. |
2
|
ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು. |
3
|
ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು. |
4
|
ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು. |
5
|
ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.) |
6
|
ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಪೊಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಪೊಸಿನಲ್ಲಿ ಕಂಡರು. ಅವನ ಹೆಸರು ಬಾರ್ ಯೇಸು.؆ ಅವನೊಬ್ಬ ಸುಳ್ಳುಪ್ರವಾದಿ. |
7
|
ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು. |
8
|
ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು. |
9
|
ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ, |
10
|
ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ! |
11
|
ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು. |
12
|
ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು. |
13
|
ಪೌಲ ಮತ್ತು ಅವನ ಸಂಗಡಿಗರು ಪಾಪೊಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು. |
14
|
ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. |
15
|
ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು. |
16
|
ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಇಂತೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ! |
17
|
ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿ ಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು. |
18
|
ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು. |
19
|
ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು. |
20
|
ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು. “ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು. |
21
|
ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು. |
22
|
ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ؆ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ. |
23
|
”ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು. |
24
|
ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲಾ,್ಲ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ؆ ಎಂದು ಬೋಧಿಸಿದನು. |
25
|
ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ؆ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ. |
26
|
”ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ. |
27
|
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು! |
28
|
ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. |
29
|
”ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು. |
30
|
ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು! |
31
|
ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ. |
32
|
”ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ. |
33
|
ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.؆ ಕೀರ್ತನೆ 2:7 |
34
|
ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.؆ ಯೆಶಾಯ 55:3 |
35
|
ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಇಂತೆನ್ನುತ್ತಾನೆ: ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.؆ ಕೀರ್ತನೆ 16:10 |
36
|
ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು! |
37
|
ಆದರೆ ದೇವರಿಂದ ಜೀವಂತವಾಗಿ ಎಬ್ಬಿಸಲ್ಪಟ್ಟ ಯೇಸುವಿನ ದೇಹ ಸಮಾಧಿಯಲ್ಲಿ ಕೊಳೆಯಲ್ಪಡಲಿಲ್ಲ. |
38
|
[This verse may not be a part of this translation] |
39
|
[This verse may not be a part of this translation] |
40
|
ಆದುದರಿಂದ ಪ್ರವಾದಿಗಳು ತಿಳಿಸಿರುವ ಈ ಕೆಲವು ಸಂಗತಿಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ: |
41
|
ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿ ಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!”؆ ಹಬಕ್ಕೂಕ 1:5 |
42
|
ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು. |
43
|
ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು. |
44
|
ಮುಂದಿನ ಸಬ್ಬತ್ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು. |
45
|
ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು. |
46
|
ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ! |
47
|
ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.”“ ಯೆಶಾಯ 49:6 |
48
|
ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು. |
49
|
ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು. |
50
|
ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು. |
51
|
ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು. |
52
|
ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು. |
Acts 13:31 Kannada Language Bible Words basic statistical display
COMING SOON ...