1
|
ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ. |
2
|
ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನು ಎಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ. |
3
|
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಬರೀ ಹತ್ತು ಮಂದಿಯೊಂದಿಗೆ ಹಿಂದಿರುಗುವರು. |
4
|
ಇಸ್ರೇಲ್ ಜನಾಂಗಕ್ಕೆ ಯೆಹೋವನು ಇಂತೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕವವನಾಗು. |
5
|
ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶ ಮಾಡಲ್ಪಡುವದು. |
6
|
ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು. |
7
|
[This verse may not be a part of this translation] |
8
|
[This verse may not be a part of this translation] |
9
|
[This verse may not be a part of this translation] |
10
|
ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಟಕಾರ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆ ಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು. |
11
|
ನೀವು ಅನ್ಯಾಯವಾಗಿ ಜನರಿಂದ ಸುಂಕವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ. |
12
|
ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ. |
13
|
ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ. |
14
|
ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದುದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕೃತ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು. |
15
|
ದುಷ್ಟತನವನ್ನು ದ್ವೇಷಿಸಿ ಒಳ್ಳೇತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಾನು. |
16
|
ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು. |
17
|
ದ್ರಾಕ್ಷಿತೋಟಗಳಲ್ಲಿ ಜನರು ಅಳುವರು ಯಾಕೆ? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ. |
18
|
ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು. |
19
|
ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಡಿಸಿಕೊಂಡವರಂತೆ ಇರುವಿರಿ. |
20
|
ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು. |
21
|
“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ. |
22
|
ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನ ಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ. |
23
|
ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ. |
24
|
ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ. |
25
|
ಇಸ್ರೇಲೇ, ನೀನು ನಾಲ್ವತ್ತು ವರುಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಸಮರ್ಪಿಸಿದ್ದಿಯೋ? ಇಲ್ಲ. |
26
|
ಅದೇ ಸಮಯದಲ್ಲಿ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ. |
27
|
ಆದುದರಿಂದ ನಿನ್ನನ್ನು ಸೆರೆಹಿಡಿಯಲ್ಪಟ್ಟವನಾಗಿ ದಮಸ್ಕದ ಆಚೆಗೆ ಕಳುಹಿಸುವೆನು.” ಇದು ಯೆಹೋವನ ನುಡಿ. |
Amos 5:27 Kannada Language Bible Words basic statistical display
COMING SOON ...