1
|
“ಪ್ರತೀ ಏಳು ವರ್ಷಗಳ ಅಂತ್ಯದಲ್ಲಿ ನೀವು ಕೊಟ್ಟ ಸಾಲಗಳನ್ನು ವಜಾಮಾಡಬೇಕು. |
2
|
ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ. |
3
|
ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು. |
4
|
ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ. |
5
|
ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು. |
6
|
ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು. |
7
|
“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು. |
8
|
ನಿಮ್ಮಲ್ಲಿರುವುದನ್ನು ನೀವು ಅವನೊಂದಿಗೆ ಹಂಚಿಕೊಳ್ಳಿ. ಅವನ ಅಗತ್ಯತೆಗೆ ತಕ್ಕಂತೆ ಸಾಲಕೊಡಿರಿ. |
9
|
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ. |
10
|
ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು. |
11
|
ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ. |
12
|
“ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ಗುಲಾಮರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು. |
13
|
ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು. |
14
|
ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದುದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ. |
15
|
ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದುದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ. |
16
|
“ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ, |
17
|
ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ತೂತು ಮಾಡಬೇಕು. ಇದು ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ. |
18
|
“ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು. |
19
|
“ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸ ಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು. |
20
|
ಪ್ರತಿ ವರ್ಷ ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು. |
21
|
“ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು. |
22
|
ಅವುಗಳನ್ನು ನಿಮ್ಮ ಮನೆಗಳಲ್ಲಿಯೇ ಬೇಕಾದರೆ ತಿನ್ನಬಹುದು. ಅದನ್ನು ಯಾರು ಬೇಕಾದರೂ ಅಂದರೆ ಶುದ್ಧರೂ ಅಶುದ್ಧರೂ ತಿನ್ನಬಹುದು. ಜಿಂಕೆಯನ್ನು, ಟಗರನ್ನು ತಿನ್ನಲು ಯಾವ ನಿಯಮಗಳು ಇವೆಯೋ, ಅದೇ ನಿಯಮಗಳು ಇದಕ್ಕೂ ಅನ್ವಯಿಸುತ್ತವೆ. |
23
|
ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು. |
Deuteronomy 15:10 Kannada Language Bible Words basic statistical display
COMING SOON ...