1
|
ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ. |
2
|
ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ. |
3
|
ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಆನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ. |
4
|
“ನೀವು ಆ ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ. |
5
|
ಮೇಲೆ ಅಲ್ಲಿಯೇ ಕಲ್ಲಿನಿಂದ ಒಂದು ಯಜ್ಞವೇದಿಕೆಯನ್ನು ಕಟ್ಟಿರಿ. ಆ ಕಲ್ಲುಗಳನ್ನು ಕೆತ್ತಲು ಕಬ್ಬಿಣದ ಸಾಧನಗಳನ್ನು ಉಪಯೋಗಿಸಬಾರದು. |
6
|
ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ. |
7
|
ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನ ಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ. |
8
|
ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು. |
9
|
“ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ. |
10
|
ಆದುದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿ ನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು. |
11
|
ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ: |
12
|
“ಜೋರ್ಡನ್ ನದಿ ದಾಟಿದ ನಂತರ, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು. |
13
|
ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು. |
14
|
“ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲರೆಲ್ಲರಿಗೆ ಹೀಗೆ ಹೇಳಬೇಕು: |
15
|
‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
16
|
“ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
17
|
“ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು ‘ಆಮೆನ್’ ಎಂದು ಹೇಳಬೇಕು. |
18
|
“ಲೇವಿಯರು, ‘ಕುರುಡರಿಗೆ ತಪ್ಪುದಾರಿ ತೋರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
19
|
“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
20
|
“ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
21
|
“ಲೇವಿಯರು, ‘ಯಾವನಾದರೂ ಪ್ರಾಣಿಯೊಂದಿಗೆ ಸಂಭೋಗಿಸಿದರೆ ಅವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
22
|
ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲಿ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
23
|
“ಲೇವಿಯರು, ‘ತನ್ನ ಅತ್ತೆಯೊಡನೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
24
|
“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
25
|
“ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. |
26
|
“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.” |
Deuteronomy 27:1 Kannada Language Bible Words basic statistical display
COMING SOON ...