1
|
ಸತ್ತ ನೊಣಗಳಿಂದ ಉತ್ತಮವಾದ ಪರಿಮಳ ತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹು ಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು. |
2
|
ಜ್ಞಾನಿಯ ಆಲೋಚನೆಗಳು ಅವನನ್ನು ಸರಿಯಾದ ದಾರಿಯಲ್ಲಿ ನಡೆಸುತ್ತವೆ. ಆದರೆ ಮೂಢನ ಆಲೋಚನೆಗಳು ಅವನನ್ನು ತಪ್ಪಾದ ದಾರಿಯಲ್ಲಿ ನಡೆಸುತ್ತವೆ. |
3
|
ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು. ಅವನು ತನ್ನ ವಿವೇಕ ಶೂನ್ಯವನ್ನು ಎಲ್ಲಿರಿಗೂ ಪ್ರಕಟಪಡಿಸುವನು. |
4
|
ನಿನ್ನ ಯಾಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ. |
5
|
ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ. |
6
|
ಐಶ್ವರ್ಯವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು. |
7
|
ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ. |
8
|
ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು. |
9
|
ಬಂಡೆಗಳನ್ನು ಉರುಳಿಸುವವನಿಗೆ ನೋವಾಗುವುದು; ಮರಗಳನ್ನು ಕಡಿಯುವವನಿಗೆ ಕೇಡಾಗುವುದು. |
10
|
ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು. |
11
|
ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ. |
12
|
ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ. |
13
|
ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು. |
14
|
ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೊ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು. |
15
|
ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು. |
16
|
ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು. |
17
|
ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲ ಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ. |
18
|
ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಚಾವಣಿಗೆಯು ಬೀಳತೊಡಗುವುದು. |
19
|
ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು. |
20
|
ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು. |
Ecclesiastes 10:8 Kannada Language Bible Words basic statistical display
COMING SOON ...