1
|
ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೊ ದ್ವೇಷಕ್ಕೆ ಗುರಿಯಾಗುವರೊ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ. |
2
|
ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು. |
3
|
ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ. |
4
|
ಇನ್ನೂ ಜೀವದಿಂದಿರುವ ಪ್ರತಿಯೊಬ್ಬರಿಗೂ ನಿರೀಕ್ಷೆಯಿದೆ. ಜೀವಂತವಾಗಿರುವ ನಾಯಿ ಸತ್ತ ಸಿಂಹಕ್ಕಿಂತಲೂ ಉತ್ತಮ ಎಂಬ ನುಡಿ ಎಷ್ಟೋ ಸತ್ಯ. |
5
|
ಜೀವಿತರಿಗೆ ಸಾಯುತ್ತೇವೆಂಬ ತಿಳಿವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳಿವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು. |
6
|
ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದು ಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ. |
7
|
ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ. |
8
|
ಒಳ್ಳೆಯ ಉಡುಪುಗಳನ್ನು ಧರಿಸಿಕೊಂಡು ನಿನ್ನನ್ನು ಆಲಂಕರಿಸಿಕೊ. |
9
|
[This verse may not be a part of this translation] |
10
|
ನಿನ್ನ ಕೆಲಸ ಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ. |
11
|
ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ. |
12
|
ಮನುಷ್ಯನಿಗೆ ಮುಂದೆ ಏನಾಗುವುದೊ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು. |
13
|
ಇದಲ್ಲದೆ ಲೋಕದಲ್ಲಿ ಜ್ಞಾನದ ಕಾರ್ಯವನ್ನು ಮಾಡುವ ಒಬ್ಬನನ್ನು ನಾನು ಕಂಡೆನು. ಅದು ತುಂಬ ಮುಖ್ಯವಾದದ್ದೆಂದು ನನಗೆ ತೋರಿತು. |
14
|
ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು. |
15
|
ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು. |
16
|
ನಾನು ಹೇಳುವುದೇನಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತು ಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ. |
17
|
ಜ್ಞಾನಿಯ ಮೆಲ್ಲನೆಯ ಮಾತುಗಳು ಮೂಢನಾದ ಅಧಿಪತಿಯು ಕೂಗಿಹೇಳಿದ ಮಾತುಗಳಿಗಿಂತಲೂ ಎಷ್ಟೋ ಉತ್ತಮ. |
18
|
ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು. |
Ecclesiastes 9:17 Kannada Language Bible Words basic statistical display
COMING SOON ...