2
|
“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು. |
3
|
ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು. |
4
|
ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಈಜಿಪ್ಟನ್ನು ಬಿಟ್ಟು ಹೊರಟಿರಿ. |
5
|
ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು. |
6
|
“ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು. |
7
|
ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು. |
8
|
ಈ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದದ್ದರಿಂದ ನಾವು ಈ ಹಬ್ಬವನ್ನು ಮಾಡುತ್ತಿದ್ದೇವೆ’ ಎಂದು ಹೇಳಬೇಕು. |
9
|
“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ. |
10
|
ಆದ್ದರಿಂದ ಪ್ರತಿವರ್ಷ ನಿಯಮಿತವಾದ ಕಾಲದಲ್ಲಿ ನೀವು ಈ ಹಬ್ಬವನ್ನು ಆಚರಿಸಬೇಕು. |
11
|
“ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ |
12
|
ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು. |
13
|
ಚೊಚ್ಚಲು ಕತ್ತೆಮರಿಯನ್ನು ನೀವು ಯೆಹೋವನಿಂದ ಬಿಡಿಸಿಕೊಳ್ಳಬೇಕೆಂದಿದ್ದರೆ ಅದಕ್ಕೆ ಬದಲಾಗಿ ಒಂದು ಕುರಿಮರಿಯನ್ನು ಕೊಡಬೇಕು. ಕತ್ತೆಮರಿಯನ್ನು ಬಿಡಿಸಿಕೊಳ್ಳಲು ಇಷ್ಟಪಡದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಆದರೆ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಯೆಹೋವನಿಂದ ಬಿಡಿಸಿಕೊಳ್ಳಲೇಬೇಕು. |
14
|
“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು. |
15
|
ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ. |
16
|
ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.” |
17
|
ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು. ಈಜಿಪ್ಟಿನಿಂದ ಪ್ರಯಾಣ |
18
|
ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು. |
19
|
ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.) |
20
|
ಇಸ್ರೇಲರು ಸುಕ್ಕೋತನ್ನು ಬಿಟ್ಟು ಏತಾಮಿನಲ್ಲಿ ಪಾಳೆಯ ಹಾಕಿದರು. ಏತಾಮು ಮರುಭೂಮಿಗೆ ಹತ್ತಿರವಾಗಿತ್ತು. |
21
|
ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು. 22ಹಗಲಿನಲ್ಲಿ ಎತ್ತರವಾದ ಮೇಘಸ್ತಂಭವೂ ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವೂ ಯಾವಾಗಲೂ ಅವರ ಮುಂಭಾಗದಲ್ಲಿ ಅವರೊಂದಿಗಿದ್ದವು. |
22
|
[This verse may not be a part of this translation] |
Exodus 13:4 Kannada Language Bible Words basic statistical display
COMING SOON ...