1
|
ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ: |
2
|
“ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರುಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರುಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ. |
3
|
ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು. |
4
|
ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು. |
5
|
“ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದರೆ ಇಲ್ಲೇ ಇರುವೆನು’ ಎಂದು ಹೇಳಬೇಕು. |
6
|
ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ತೂತುಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು. |
7
|
“ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ. |
8
|
ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು. |
9
|
ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು. |
10
|
“ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು. |
11
|
ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ. |
12
|
“ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು. |
13
|
ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ. |
14
|
ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು. |
15
|
“ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆಯುವವನನ್ನು ಕೊಲ್ಲಬೇಕು. |
16
|
“ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು. |
17
|
“ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು. |
18
|
“ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು. |
19
|
ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು. |
20
|
“ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು. |
21
|
ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕೆಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ. |
22
|
“ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು. |
23
|
ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು. |
24
|
ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು, |
25
|
ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು. |
26
|
“ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ. |
27
|
ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ. |
28
|
“ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿಸಸ್ಥನಲ್ಲ. |
29
|
ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು. |
30
|
ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು. |
31
|
“ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು. |
32
|
ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು. |
33
|
ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ, |
34
|
ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ. |
35
|
“ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು. |
36
|
ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು. |
Exodus 21:1 Kannada Language Bible Words basic statistical display
COMING SOON ...