1
|
ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು. |
2
|
ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು. |
3
|
[This verse may not be a part of this translation] |
4
|
[This verse may not be a part of this translation] |
5
|
ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು. |
6
|
ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು. |
7
|
ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು. |
8
|
ನೆಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು. |
9
|
ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು. |
10
|
ಏಳು ದಿನಗಳವರೆಗೆ ನೋಹನು ಕಾದುಕೊಂಡಿದ್ದು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. |
11
|
ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು. |
12
|
ಏಳು ದಿನಗಳ ನಂತರ ನೋಹನು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಆದರೆ ಅದು ಈ ಸಲ ಹಿಂತಿರುಗಿ ಬರಲಿಲ್ಲ. |
13
|
ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು. |
14
|
ಎರಡನೆಯ ತಿಂಗಳ ಇಪ್ಪತ್ತೇಳನೆಯ ದಿನದೊಳಗೆ ನೆಲವೆಲ್ಲಾ ಸಂಪೂರ್ಣವಾಗಿ ಒಣಗಿಹೋಯಿತು. |
15
|
[This verse may not be a part of this translation] |
16
|
[This verse may not be a part of this translation] |
17
|
ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು. |
18
|
ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು. |
19
|
ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು. |
20
|
ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು. |
21
|
ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ. |
22
|
ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು. |
Genesis 8:16 Kannada Language Bible Words basic statistical display
COMING SOON ...