1
|
ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ. |
2
|
ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ. |
3
|
ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು. |
4
|
ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ. |
5
|
ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ. |
6
|
ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ. |
7
|
ಆಗ ನಾನು, ದೇವರೇ, ನಾನು ಇಲ್ಲಿದ್ದೇನೆ. ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ؆ ಎಂದು ಹೇಳಿದೆ.” ಕೀರ್ತನೆ 40:6-8 |
8
|
ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.) |
9
|
[This verse may not be a part of this translation] |
10
|
ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು. |
11
|
ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ. |
12
|
ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು. |
13
|
ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ. |
14
|
ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು. |
15
|
ಪವಿತ್ರಾತ್ಮನು ನಮಗೆ ಇದರ ಬಗ್ಗೆ ತಿಳಿಸಿದ್ದಾನೆ. ಮೊದಲನೆಯದಾಗಿ ಆತನು ಹೇಳುವುದೇನಂದರೆ: |
16
|
”ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33 |
17
|
ನಂತರ ಆತನು ಹೇಳುವುದೇನಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ. ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.” ಯೆರೆಮೀಯ 31:34 |
18
|
ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ. |
19
|
[This verse may not be a part of this translation] |
20
|
[This verse may not be a part of this translation] |
21
|
ದೇವರ ಮನೆಯನ್ನು ಆಳಲು ನಮಗೊಬ್ಬ ಶ್ರೇಷ್ಠ ಯಾಜಕನಿರುವನು. |
22
|
ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ. |
23
|
ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು. |
24
|
ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ. |
25
|
ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು. |
26
|
ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ. |
27
|
ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ. |
28
|
ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು. |
29
|
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು. |
30
|
”ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ. |
31
|
”ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ. |
32
|
ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ. |
33
|
ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ. |
34
|
ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ. |
35
|
ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ. |
36
|
ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ. |
37
|
ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೆ, ಬರುವಾತನು ಬರುತ್ತಾನೆ. ಆತನು ತಡ ಮಾಡುವುದಿಲ್ಲ. |
38
|
ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”ಯೆರೆಮೀಯ 2:3-4 |
39
|
ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ. |
Hebrews 10:17 Kannada Language Bible Words basic statistical display
COMING SOON ...