Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Isaiah Chapters

Isaiah 57 Verses

1 ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿ ಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.
2 ಆದರೆ ಶಾಂತಿ ಸಮಾಧಾನಗಳು ಬರುತ್ತವೆ. ಆಗ ಜನರು ತಮ್ಮ ಸ್ವಂತ ಹಾಸಿಗೆಗಳ ಮೇಲೆ ವಿಶ್ರಮಿಸಿಕೊಳ್ಳುವರು; ದೇವರು ಅಪೇಕ್ಷಿಸುವ ರೀತಿಯಲ್ಲಿ ಜೀವಿಸುವರು.
3 “ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.
4 ನೀವು ಸುಳ್ಳುಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯ್ಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.
5 ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.
6 ನದಿದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.
7 ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ.
8 ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. ನೀವು ಆ ದೇವರುಗಳನ್ನು ಪ್ರೀತಿಸುತ್ತೀರಿ. ಅವುಗಳ ಬೆತ್ತಲೆ ಶರೀರಗಳನ್ನು ನೋಡುವದರಲ್ಲಿ ಸಂತೋಷಿಸುವಿರಿ. ನೀವು ನನ್ನೊಂದಿಗೆ ಇದ್ದಿರಿ. ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. ಅನಂತರ ನೀವು ಹೋಗಿ ಆ ಸುಳ್ಳು ದೇವರೊಂದಿಗೆ ಒಪ್ಪಂದ ಮಾಡುತ್ತೀರಿ.
9 ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧ ದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.
10 “ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ. ಯಾಕೆಂದರೆ ಇವುಗಳನ್ನು ಮಾಡುವುದರಲ್ಲೇ ನಿಮಗೆ ಸಂತೋಷ.
11 ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದೀರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.
12 ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.
13 ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.
14 ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.
15 ದೇವರು ಉನ್ನತ ಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರ ಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸ ಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸಜೀವ ಕೊಡುತ್ತೇನೆ.
16 ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.
17 ಈ ಜನರು ದುಷ್ಟಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.
18 8ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.
19 ನಾನು ಅವರಿಗೆ “ಸಮಾಧಾನ” ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು” ಇದು ಯೆಹೋವನ ನುಡಿ.
20 ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ ಸಮಾಧಾನದಲ್ಲಿಯೂ ಮೌನದಿಂದಲೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು. ನನ್ನ ದೇವರು ಹೇಳುವದೇನೆಂದರೆ:
21 “ದುಷ್ಟ ಜನರಿಗೆ ಸಮಾಧಾನವಿಲ್ಲ.”
×

Alert

×