1
|
ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ. |
2
|
ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ. |
3
|
ನಾವು ಕುದುರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಬಹುದು. |
4
|
ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ಆ ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ. |
5
|
ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ. |
6
|
ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ. |
7
|
ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ. |
8
|
ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ. |
9
|
ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಆ ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ. |
10
|
ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು. |
11
|
ಸಿಹಿಯಾದ ನೀರು ಮತ್ತು ಕಹಿಯಾದ ನೀರು ಒಂದೇ ಬುಗ್ಗೆಯಿಂದ ಹರಿಯುತ್ತವೆಯೋ? ಇಲ್ಲ! |
12
|
ನನ್ನ ಸಹೋದರ ಸಹೋದರಿಯರೇ, ಅಂಜೂರದ ಮರವು ಆಲಿವ್ ಕಾಯಿಗಳನ್ನು ಬಿಡುವುದೇ? ಇಲ್ಲ! ದ್ರಾಕ್ಷೆಬಳ್ಳಿಯು ಅಂಜೂರದ ಹಣ್ಣನ್ನು ಬಿಡುವುದೇ? ಇಲ್ಲ! ಉಪ್ಪು ನೀರಿನಿಂದ ತುಂಬಿದ ಬಾವಿಯು ಸಿಹಿ ನೀರನ್ನು ಕೊಡುವುದಿಲ್ಲ. |
13
|
ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ. |
14
|
ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೆ. |
15
|
ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು. |
16
|
ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ. |
17
|
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು. |
18
|
ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ. |
James 3:18 Kannada Language Bible Words basic statistical display
COMING SOON ...