1
|
ಆಗ ನಾಮಾಥ ದೇಶದ ಚೋಫರನು ಯೋಬನಿಗೆ ಉತ್ತರಿಸಿದನು: |
2
|
“ಮಾತುಗಳ ಈ ಪ್ರವಾಹಕ್ಕೆ ಯಾರಾದರೊಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ! |
3
|
ಯೋಬನೇ, ಅರ್ಥರಹಿತವಾದ ನಿನ್ನ ಮಾತುಗಳಿಗೆ ನಮ್ಮಲ್ಲಿ ಉತ್ತರವೇ ಇಲ್ಲವೆಂದು ಆಲೋಚಿಸಿಕೊಂಡಿರುವೆಯಾ? ನೀನು ದೇವರನ್ನು ಅಪಹಾಸ್ಯ ಮಾಡುವಾಗ ಯಾರೂ ನಿನ್ನನ್ನು ಎಚ್ಚರಿಸುವುದಿಲ್ಲ ಎಂದುಕೊಂಡಿರುವಿಯಾ? |
4
|
ಯೋಬನೇ, ನೀನು ದೇವರಿಗೆ ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ? |
5
|
ದೇವರು ನಿನಗೆ ಉತ್ತರ ನೀಡಿ ನಿನ್ನನ್ನು ತಪ್ಪಿತಸ್ಥನೆಂದು ಹೇಳಿದರೆ ಎಷ್ಟೋ ಒಳ್ಳೆಯದು. |
6
|
ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ. |
7
|
“ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ? |
8
|
ಆತನ ಜ್ಞಾನವು ಆಕಾಶಕ್ಕಿಂತಲೂ ಉನ್ನತವಾಗಿದೆ. ಅದನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವೇ ಇಲ್ಲ. ಅದು ಮೃತ್ಯುಲೋಕಕ್ಕಿಂತಲೂ ಆಳವಾಗಿದೆ. ನೀನು ಅದನ್ನು ಗ್ರಹಿಸಿಕೊಳ್ಳಲಾರೆ. |
9
|
ದೇವರ ಜ್ಞಾನವು ಭೂಮಿಗಿಂತಲೂ ಉದ್ದವಾಗಿದೆ; ಸಮುದ್ರಕ್ಕಿಂತಲೂ ಅಗಲವಾಗಿದೆ. |
10
|
“ದೇವರು ನಿನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಎಳೆದುಕೊಂಡು ಬರುವುದಾದರೆ ಆತನನ್ನು ತಡೆಯಬಲ್ಲವರು ಯಾರು? |
11
|
ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು. |
12
|
ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೊ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು. |
13
|
“ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೋ. |
14
|
ನೀನು ಪಾಪವನ್ನು ಹಿಡಿದುಕೊಂಡಿದ್ದರೆ ಅದನ್ನು ನಿನ್ನಿಂದ ದೂರಮಾಡು. ದುಷ್ಟತನವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ. |
15
|
ಆಗ ನೀನು ಖಂಡಿತವಾಗಿ ನಾಚಿಕೆಯಿಲ್ಲದೆ ತಲೆಯೆತ್ತುವೆ; ಸ್ಥಿರವಾಗಿ ನಿಂತುಕೊಂಡು ನಿರ್ಭಯದಿಂದಿರುವೆ. |
16
|
ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ. |
17
|
ನಿನ್ನ ಜೀವಿತವು ಮಧ್ಯಾಹ್ನದ ಸೂರ್ಯನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವುದು. ನಿನ್ನ ಜೀವಿತದ ಕಾರ್ಗತ್ತಲೆಯ ತಾಸುಗಳು ಮುಂಜಾನೆಯ ಸೂರ್ಯನಂತೆ ಹೊಳೆಯುತ್ತವೆ. |
18
|
ಯೋಬನೇ, ನಿನಗೆ ನಿರೀಕ್ಷೆಯಿರುವುದರಿಂದ ಸುರಕ್ಷಿತನಾಗಿರುವೆ. ಆತನು ನಿನ್ನನ್ನು ಪರಿಪಾಲಿಸುತ್ತಾ ನಿನಗೆ ವಿಶ್ರಾಂತಿಯನ್ನು ದಯಪಾಲಿಸುವನು. |
19
|
ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು. |
20
|
ಆದರೆ ದುಷ್ಟರು ಸಹಾಯಕ್ಕಾಗಿ ಎದುರು ನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.” |
Job 11:16 Kannada Language Bible Words basic statistical display
COMING SOON ...