1
|
ಆಮೇಲೆ ಯೋಬನು ಚೋಫರನಿಗೆ ಹೀಗೆ ಉತ್ತರಿಸಿದನು: |
2
|
“ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು. |
3
|
ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು. |
4
|
“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು, ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. |
5
|
ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು. |
6
|
ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ. |
7
|
“ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ. |
8
|
ಭೂಮಿಯೊಂದಿಗೆ ಮಾತಾಡು, ಅದು ನಿನಗೆ ಉಪದೇಶಿಸುತ್ತದೆ. ಸಮುದ್ರದ ಮೀನುಗಳು ತಮ್ಮ ಜ್ಞಾನವನ್ನು ನಿನಗೆ ತಿಳಿಸಲಿ. |
9
|
ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು. |
10
|
ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ. |
11
|
ಆದರೆ ನಾಲಿಗೆಯು ಊಟದ ರುಚಿಯನ್ನು ಆನಂದಿಸುವಂತೆ ಕಿವಿಗಳು ಮಾತುಗಳನ್ನು ವಿವೇಚಿಸುವುದಿಲ್ಲವೇ? |
12
|
“ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ? |
13
|
“ಜ್ಞಾನವೂ ಶಕ್ತಿಯೂ ಆತನವೇ. ಆಲೋಚನೆಯೂ ವಿವೇಕವೂ ಆತನವೇ. |
14
|
ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ. |
15
|
ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು. |
16
|
ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ! |
17
|
ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು. |
18
|
ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು. |
19
|
ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು. |
20
|
ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು. |
21
|
ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು. |
22
|
ಕಾರ್ಗತ್ತಲೆಯೊಳಗಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು. |
23
|
ದೇವರು ಜನಾಂಗಗಳನ್ನು ವೃದ್ಧಿಮಾಡಿ ಬಲಗೊಳಿಸುವನು; ಬಳಿಕ ಅವುಗಳನ್ನು ನಾಶಮಾಡುವನು. ಆತನು ಜನಾಂಗಗಳನ್ನು ವಿಸ್ತಾರವಾಗಿ ಬೆಳೆಯ ಮಾಡುವನು; ನಂತರ ಅವುಗಳನ್ನು ಚದರಿಸಿಬಿಡುವನು. |
24
|
ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು. |
25
|
ಅವರು ಬೆಳಕಿಲ್ಲದೆ ಕತ್ತಲೆಯಲ್ಲಿ ತಡವಾಡುವರು. ಆತನು ಅವರನ್ನು ಅಮಲೇರಿದವರಂತೆ ಅಲೆದಾಡಿಸುವನು.” |
Job 12:11 Kannada Language Bible Words basic statistical display
COMING SOON ...