1
|
ಬಳಿಕ ನಾಮಾಥ ದೇಶದ ಚೋಫರನು ಉತ್ತರಕೊಟ್ಟನು: |
2
|
“ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು. |
3
|
ನಿನ್ನ ಉತ್ತರಗಳಿಂದ ನೀನು ನಮಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ. |
4
|
[This verse may not be a part of this translation] |
5
|
[This verse may not be a part of this translation] |
6
|
ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು; ಅವನ ತಲೆಯು ಮೋಡಗಳಿಗೆ ತಗುಲಬಹುದು. |
7
|
ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು. |
8
|
ಅವನು ಕನಸಿನಂತೆ ಹಾರಿಹೋಗುವನು. ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು. |
9
|
ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ, ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ. |
10
|
ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು. |
11
|
ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳು ಪಾಲಾಗುತ್ತವೆ. |
12
|
“ದುಷ್ಟನ ಬಾಯಿಗೆ ಕೆಟ್ಟತನವು ಸಿಹಿಯಾಗಿರುವುದು. ಅವನು ಅದನ್ನು ತನ್ನ ನಾಲಿಗೆಯ ಕೆಳಗೆ ಅಡಗಿಸಿಕೊಳ್ಳುವನು. |
13
|
ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು. ಅದನ್ನು ತನ್ನ ಬಾಯಿಯಲ್ಲಿ ಸಿಹಿತಿನಿಸಿನಂತೆ ಇಟ್ಟುಕೊಂಡಿರುವನು. |
14
|
ಆದರೆ ಅದು ಅವನ ಹೊಟ್ಟೆಯಲ್ಲಿ ಹಾವಿನ ವಿಷದ ಹಾಗೆ ಕಹಿಯಾದ ವಿಷವಾಗುವುದು. |
15
|
ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು. |
16
|
ದುಷ್ಟನ ಪಾನೀಯವು ಹಾವಿನ ವಿಷದಂತಿದೆ. ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು. |
17
|
ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು ನೋಡುವುದೇ ಇಲ್ಲ. |
18
|
ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು. |
19
|
ಯಾಕಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ. |
20
|
“ಅವನಿಗೆ ತೃಪ್ತಿಯೇ ಇಲ್ಲ. ಅವನ ಐಶ್ವರ್ಯವು ಅವನನ್ನು ರಕ್ಷಿಸಲಾರದು. |
21
|
ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ. ಅವನ ಅಭಿವೃದ್ಧಿಯು ನಿಂತು ಹೋಗುವುದು. |
22
|
ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು; ಅವನ ಕಷ್ಟಗಳು ಅವನ ಮೇಲೆ ಬೀಳುವವು! |
23
|
ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು. |
24
|
ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು; ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು. |
25
|
ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು. |
26
|
ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶ ಮಾಡುವುದು. |
27
|
ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ. ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತದೆ. |
28
|
ಅವನ ಮನೆಯಲ್ಲಿರುವ ಪ್ರತಿಯೊಂದನ್ನು ದೇವರ ಕೋಪದ ಪ್ರವಾಹವು ಕೊಚ್ಚಿಕೊಂಡು ಹೋಗುವುದು. |
29
|
ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.” |
Job 20:4 Kannada Language Bible Words basic statistical display
COMING SOON ...