1
|
ಬಳಿಕ ಯೋಬನು ಉತ್ತರಕೊಟ್ಟನು: |
2
|
“ನಾನು ಹೇಳುವುದನ್ನು ಕೇಳಿ. ನಿಮ್ಮಿಂದ ನನಗಾಗಬೇಕಾದ ಆದರಣೆ ಇಷ್ಟೇ. |
3
|
ನಾನು ಮಾತಾಡುವಾಗ ತಾಳ್ಮೆಯಿಂದಿರಿ. ನಾನು ಮಾತಾಡಿದ ಮೇಲೆ ನೀವು ನನ್ನನ್ನು ಗೇಲಿಮಾಡಿದರೂ ಮಾಡಿರಿ. |
4
|
“ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ. |
5
|
ನನ್ನನ್ನು ನೋಡಿ ಬೆರಗಾಗಿ ನಿಮ್ಮ ಬಾಯಿಯ ಮೇಲೆ ಕೈಯಿಟ್ಟುಕೊಳ್ಳಿರಿ. ಗಾಬರಿಯಿಂದ ನನ್ನನ್ನು ಎವೆಯಿಕ್ಕದೆ ನೋಡಿರಿ! |
6
|
ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ ನನಗೆ ಭಯವಾಗುತ್ತದೆ; ನನ್ನ ದೇಹವು ನಡುಗುತ್ತದೆ. |
7
|
ದುಷ್ಟರು ದೀರ್ಘಕಾಲ ಜೀವಿಸುವುದೇಕೆ? ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ? |
8
|
ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು; ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು. |
9
|
ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ. |
10
|
ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ. ಅವರ ಹಸುಗಳು ಕರುಗಳನ್ನು ಈಯುತ್ತವೆ. |
11
|
ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು. ಅವರ ಮಕ್ಕಳು ಸುತ್ತಮುತ್ತ ಕುಣಿದಾಡುವರು. |
12
|
ಅವರು ತಂಬೂರಿಗಳನ್ನೂ ಹಾರ್ಪ್ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು. |
13
|
ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು. |
14
|
ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು. |
15
|
ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು. |
16
|
“ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ. |
17
|
ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು? |
18
|
ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು? |
19
|
‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು. |
20
|
ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ. |
21
|
ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ. |
22
|
“ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು. |
23
|
ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು. |
24
|
ಅವನ ದೇಹವು ಚೆನ್ನಾಗಿ ಪೋಷಿಸಲ್ಪಟ್ಟಿತು, ಅವನ ಎಲುಬುಗಳು ಮಜ್ಜೆಯಿಂದ ಇನ್ನೂ ಸಾರವಾಗಿರುವುದು. |
25
|
ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು. ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ. |
26
|
ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು. |
27
|
“ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ನಾನು ಬಲ್ಲೆ. |
28
|
‘ನೀತಿವಂತನ ಮನೆಯು ಎಲ್ಲಿದೆ? ದುಷ್ಟರು ವಾಸವಾಗಿರುವುದು ಎಲ್ಲಿ?’ ಎಂದು ನೀವು ಕೇಳಬಹುದು. |
29
|
“ನೀವು ಖಂಡಿತವಾಗಿಯೂ ಪ್ರಯಾಣಿಕರನ್ನು ಕೇಳಿದ್ದೀರಿ. ನೀವು ಖಂಡಿತವಾಗಿಯೂ ಅವರ ವರದಿಯನ್ನು ಒಪ್ಪಿಕೊಳ್ಳುವಿರಿ. |
30
|
ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು. |
31
|
ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ. |
32
|
ದುಷ್ಟನನ್ನು ಸಮಾಧಿಗೆ ಹೊತ್ತುಕೊಂಡು ಹೋದಾಗ ಅವನ ಸಮಾಧಿಯ ಸಮೀಪದಲ್ಲಿ ಕಾವಲುಗಾರರು ನಿಂತುಕೊಳ್ಳುವರು. |
33
|
ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು. |
34
|
“ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.” |
Job 21:10 Kannada Language Bible Words basic statistical display
COMING SOON ...