1
|
“ಬೆಳ್ಳಿಯ ಗಣಿಗಳು ಇವೆ; ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ. |
2
|
ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು. |
3
|
ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು. |
4
|
ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು; ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದು ಹೋಗುವರು; ಆಳವಾದ ಆ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ. ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು. |
5
|
ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೊ ಬೆಂಕಿಯಿಂದ ಕರಗಿ ಹೋದಂತಿರುವುದು. |
6
|
ಭೂಮಿಯ ಕೆಳಭಾಗದಲ್ಲಿ ಇಂದ್ರನೀಲ ಮಣಿಗಳೂ ಚಿನ್ನದ ಅದಿರೂ ಸಿಕ್ಕುತ್ತವೆ. |
7
|
ಕಾಡುಪಕ್ಷಿಗಳಿಗೆ ಗಣಿಯ ಮಾರ್ಗವು ಗೊತ್ತಿಲ್ಲ. ಯಾವ ಗಿಡುಗವೂ ಕತ್ತಲೆಯ ಆ ಮಾರ್ಗಗಳನ್ನು ನೋಡಿಲ್ಲ. |
8
|
ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ. ಸಿಂಹಗಳು ಆ ಮಾರ್ಗದ ಮೇಲೆ ಹಾದುಹೋಗಿಲ್ಲ. |
9
|
ಕಾರ್ಮಿಕರು ಅತ್ಯಂತ ಗಟ್ಟಿಯಾದ ಬಂಡೆಗಳನ್ನು ಅಗೆಯುವರು. ಅವರು ಬೆಟ್ಟಗಳನ್ನು ಹೊಡೆದು ನೆಲಸಮ ಮಾಡುವರು. |
10
|
ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು. |
11
|
ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು; ಮರೆಯಾಗಿರುವ ವಸ್ತುಗಳನ್ನು ಬೆಳಕಿಗೆ ತರುವರು. |
12
|
“ಆದರೆ ಮನುಷ್ಯನು ಜ್ಞಾನವನ್ನು ಕಂಡುಕೊಳ್ಳುವುದೆಲ್ಲಿ? ವಿವೇಕವು ದೊರೆಯುವ ಸ್ಥಳವೆಲ್ಲಿ? |
13
|
ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ. |
14
|
“ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ. ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಸಮುದ್ರವು ಹೇಳುತ್ತದೆ. |
15
|
ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇಡೀ ಲೋಕದ ಬೆಳ್ಳಿಯನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. |
16
|
ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲ ಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು. |
17
|
ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು. |
18
|
ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ. |
19
|
ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ. ಶುದ್ಧ ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ. |
20
|
“ಹೀಗಿರುವಲ್ಲಿ ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಎಲ್ಲಿ ದೊರಕುವುದು? |
21
|
ಜ್ಞಾನವು ಎಲ್ಲಾ ಜೀವಿಗಳಿಗೂ ಮರೆಯಾಗಿದೆ. ಆಕಾಶದ ಪಕ್ಷಿಗಳು ಸಹ ಅದನ್ನು ಕಾಣಲಾರವು. |
22
|
ನಾಶಲೋಕವೂ ಮೃತ್ಯುವೂ, ‘ನಾವು ಜ್ಞಾನದ ಬಗ್ಗೆ ಸುದ್ದಿಗಳನ್ನು ಮಾತ್ರ ಕೇಳಿದ್ದೇವೆ’ ಎಂದು ಹೇಳುತ್ತವೆ. |
23
|
ಜ್ಞಾನದ ಮಾರ್ಗವನ್ನು ತಿಳಿದಿರುವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ. |
24
|
ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ ಆಕಾಶದ ಕೆಳಗಿರುವ ಪ್ರತಿಯೊಂದನ್ನೂ ನೋಡುವವನಾಗಿದ್ದಾನೆ. |
25
|
ಆತನು ಗಾಳಿಗೆ ಶಕ್ತಿಯನ್ನು ಕೊಟ್ಟಾಗಲೂ ಸಾಗರಗಳ ವಿಸ್ತೀರ್ಣವನ್ನು ನಿರ್ಧರಿಸಿದಾಗಲೂ |
26
|
ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ |
27
|
ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು. ಅದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದನು. |
28
|
ಇದಲ್ಲದೆ ದೇವರು ಮನುಷ್ಯರಿಗೆ, “ಯೆಹೋವನಲ್ಲಿ ಭಯಭಕ್ತಿಯಿಂದರಿರುವುದೇ ಜ್ಞಾನ. ದುಷ್ಟತನವನ್ನು ತೊರೆದು ಬಿಡುವುದೇ ವಿವೇಕ” ಎಂದು ಹೇಳಿದನು. |
Job 28:20 Kannada Language Bible Words basic statistical display
COMING SOON ...