Indian Language Bible Word Collections
Job 3:15
Job Chapters
Job 3 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Job Chapters
Job 3 Verses
1
|
ಬಳಿಕ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ ಇಂತೆಂದನು: |
2
|
“ನಾನು ಹುಟ್ಟಿದ ದಿನವು ಹಾಳಾಗಲಿ, |
3
|
‘ಗಂಡು ಮಗುವು ಗರ್ಭಧರಿಸಿತು’ ಎಂದು ಹೇಳಿದ ಆ ರಾತ್ರಿಯು ನಾಶವಾಗಲಿ. |
4
|
ಆ ದಿನವು ಕತ್ತಲೆಯಾಗಲಿ. ಆ ದಿನದ ಬಗ್ಗೆ ಮೇಲೋಕದ ದೇವರು ಯೋಚಿಸದಿರಲಿ. ಆ ದಿನದ ಮೇಲೆ ಬೆಳಕು ಬೆಳಗದಿರಲಿ. |
5
|
ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ. |
6
|
ಕಾರ್ಗತ್ತಲೆಯು ಆ ರಾತ್ರಿಯನ್ನು ಆವರಿಸಿಕೊಳ್ಳಲಿ. ಆ ರಾತ್ರಿಯು ವರ್ಷದ ದಿನಗಳಲ್ಲಿ ಒಂದು ದಿನವೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ. |
7
|
ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹಧ್ವನಿಯೂ ಕೇಳದಿರಲಿ. |
8
|
ಲೆವ್ಯಾತಾನನನ್ನು ಎಬ್ಬಿಸಬಲ್ಲ ಹಾಗೂ ದಿನಗಳನ್ನು ಶಪಿಸುವ ಮಾಂತ್ರಿಕರು ನಾನು ಹುಟ್ಟಿದ ರಾತ್ರಿಯನ್ನು ಶಪಿಸಲಿ. |
9
|
ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರು ನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ. |
10
|
ಯಾಕಂದರೆ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲ. |
11
|
“ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ? |
12
|
ತಾಯಿಯು ತನ್ನ ಮಡಿಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಗೊಟ್ಟದ್ದೇಕೆ? |
13
|
ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು. |
14
|
ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ. |
15
|
ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು. |
16
|
ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು. |
17
|
ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು. |
18
|
ಸೆರೆಯಾಳುಗಳು ಸಹ ಸಮಾಧಿಯಲ್ಲಿ ಸುಖವಾಗಿರುವರು; ಅವರ ಒಡೆಯನ ಧ್ವನಿಯು ಅವರಿಗೆ ಕೇಳಿಸುವುದಿಲ್ಲ. |
19
|
ಸಮಾಧಿಯಲ್ಲಿ ದೊಡ್ಡವರು ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ. |
20
|
“ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ? |
21
|
ಅವನು ಸಾಯಲು ಬಯಸಿದರೂ ಸಾವು ಬರುವುದಿಲ್ಲ. ಹೂಳಿಟ್ಟಿರುವ ಭಂಡಾರವನ್ನು ಹುಡುಕುವುದಕ್ಕಿಂತಲೂ ಹೆಚ್ಚಾಗಿ ವ್ಯಥೆಯುಳ್ಳವನು ಸಾವನ್ನೇ ಹುಡುಕುವನು. |
22
|
ಅವರು ಸಮಾಧಿಗೆ ಸೇರುವಾಗ ಬಹು ಸಂತೋಷಪಡುವರು; ಆನಂದದಿಂದ ಕೂಗುವರು. |
23
|
ದೇವರು ಯಾರ ಭವಿಷ್ಯವನ್ನು ರಹಸ್ಯವಾಗಿಡುತ್ತಾನೊ, ಯಾರ ಸುತ್ತಲೂ ಗೋಡೆಯನ್ನು ಕಟ್ಟುತ್ತಾನೊ ಅವರಿಗೆ ಯಾಕೆ ಜೀವವನ್ನು ಕೊಡುತ್ತಾನೆ? |
24
|
ಊಟದ ಸಮಯದಲ್ಲಿ ನಿಟ್ಟುಸಿರೇ ನನ್ನ ಆಹಾರವಾಗಿದೆ. ನನ್ನ ನರಾಳಾಟವು ಜಲಧಾರೆಯಂತಿದೆ. |
25
|
ಆಪತ್ತು ಸಂಭವಿಸಬಹುದೆಂದು ನಾನು ಭಯಗೊಂಡಿದ್ದೆನು. ನಾನು ಯಾವುದಕ್ಕೆ ಹೆದರಿಕೊಂಡಿದ್ದೆನೊ ಅದು ನನಗೆ ಸಂಭವಿಸಿದೆ! |
26
|
ನನಗೆ ಸಮಾಧಾನವಿಲ್ಲ; ವಿಶ್ರಾಂತಿಯೂ ಇಲ್ಲ. ನನಗೆ ಉಪಶಮನವಿಲ್ಲ; ನನಗಿರುವುದು ಕೇವಲ ಕಷ್ಟವೊಂದೇ!” |