1
|
“ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು. |
2
|
ಈಗ ನಾನು ನನ್ನ ಬಾಯಿ ತೆರೆಯುವೆನು. ನಾನು ಮಾತಾಡಲು ಸಿದ್ಧನಾಗಿದ್ದೇನೆ. |
3
|
ನನ್ನ ಹೃದಯವು ಯಥಾರ್ಥವಾಗಿದೆ. ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು. |
4
|
ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು. |
5
|
ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೋ. ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು! |
6
|
ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು. |
7
|
ಯೋಬನೇ, ನನಗೆ ಭಯಪಡಬೇಡ. ನಾನು ನಿನ್ನನ್ನು ಸೋಲಿಸುವುದಿಲ್ಲ. |
8
|
“ಆದರೆ ಯೋಬನೇ, ನೀನು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ. |
9
|
ನೀನು ಹೀಗೆಂದು ಹೇಳಿದೆ: ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ! |
10
|
ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ; |
11
|
ದೇವರು ನನ್ನ ಕಾಲುಗಳನ್ನು ಸರಪಣಿಯಿಂದ ಕಟ್ಟಿದ್ದಾನೆ; ನಾನು ಮಾಡುವ ಪ್ರತಿಯೊಂದನ್ನೂ ದೇವರು ಗಮನಿಸುತ್ತಿದ್ದಾನೆ.’ |
12
|
“ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ಯಾಕೆಂದರೆ ನಾನು ಅದನ್ನು ನಿರೂಪಿಸುವೆ. ದೇವರು ಮನುಷ್ಯನಿಗಿಂತ ದೊಡ್ಡವನು. |
13
|
ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ? |
14
|
ಒಂದು ವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. ಒಂದು ವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು. |
15
|
ಜನರು ಗಾಢನಿದ್ರೆಯಲ್ಲಿರುವಾಗ ದೇವರು ಕನಸಿನ ಮೂಲಕವಾಗಲಿ ದರ್ಶನದ ಮೂಲಕವಾಗಲಿ ಮಾತಾಡಬಹುದು. |
16
|
ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು. |
17
|
ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ. |
18
|
ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ. |
19
|
“ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆ ಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ. |
20
|
ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು. |
21
|
ಅವನು ಆಸ್ತಿಪಂಜರದಂತೆ ಕ್ಷೀಣವಾಗುವನು. ಕಾಣದಿದ್ದ ಅವನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡು ಅವು ಹೊರತೋರುತ್ತವೆ. |
22
|
ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ. |
23
|
ಒಂದು ವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ, |
24
|
“ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ |
25
|
ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; ಯೌವನಪ್ರಾಯದಂತೆ ದೃಢಕಾಯವಾಗುವುದು. |
26
|
ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು. |
27
|
ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ! |
28
|
ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು. |
29
|
[This verse may not be a part of this translation] |
30
|
[This verse may not be a part of this translation] |
31
|
“ಯೋಬನೇ, ನನಗೆ ಗಮನಕೊಡು. ನನಗೆ ಕಿವಿಗೊಡು. ಮೌನವಾಗಿರು; ಮತ್ತು ಮಾತಾಡಲು ನನಗೆ ಅವಕಾಶಕೊಡು. |
32
|
ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ. |
33
|
ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” |
Job 33:29 Kannada Language Bible Words basic statistical display
COMING SOON ...