1
|
“ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ? |
2
|
ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೇಕಿಚ್ಚು ಅವನನ್ನೇ ಕೊಲ್ಲುವುದು. |
3
|
ಅಭಿವೃದ್ಧಿಯಾಗುತ್ತಿರುವ ಮೂರ್ಖನನ್ನು ನಾನು ನೋಡಿದ್ದೇನೆ. ಇದ್ದಕ್ಕಿದ್ದಂತೆ ಅವನ ಮನೆಯು ಶಾಪಗ್ರಸ್ತವಾಯಿತು. |
4
|
ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ. |
5
|
ಹಸಿದಿರುವವರು ಆ ಮೂರ್ಖನ ಬೆಳೆಗಳನ್ನು ತಿಂದುಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ಧಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು. |
6
|
ವಿಪತ್ಕಾಲಗಳು ಬರುವುದು ಧೂಳಿನಿಂದಲ್ಲ; ಕೇಡು ಬೆಳೆಯುವುದು ನೆಲದಿಂದಲ್ಲ. |
7
|
ಆದರೆ ಮನುಷ್ಯರಿಂದ ಕೇಡುಗಳು ಉದ್ಭವಿಸುವುದೂ ಬೆಂಕಿಯಿಂದ ಕಿಡಿಗಳು ಮೇಲಕ್ಕೆ ಹಾರುವುದೂ ಸಹಜ. |
8
|
“ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಆತನಿಗೆ ಹೇಳಿಕೊಳ್ಳುತ್ತಿದ್ದೆನು. |
9
|
ದೇವರ ಅದ್ಭುತಕಾರ್ಯಗಳು ಗ್ರಹಿಸಲಶಕ್ಯ. ಆತನ ಮಹತ್ಕಾರ್ಯಗಳು ಅಸಂಖ್ಯಾತ. |
10
|
ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು. |
11
|
ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವ್ಯಥೆಯಿಂದಿರುವವರನ್ನು ಸಂತೋಷಗೊಳಿಸುವನು. |
12
|
ದೇವರು ಯುಕ್ತಿವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು. |
13
|
ದೇವರು ಜ್ಞಾನಿಗಳನ್ನು ಅವರ ತಂತ್ರಗಳಲ್ಲೇ ಹಿಡಿದುಕೊಳ್ಳುವನು; ಮೋಸಗಾರರ ಆಲೋಚನೆಗಳನ್ನು ವಿಫಲಗೊಳಿಸುವನು. |
14
|
ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು. |
15
|
ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು. |
16
|
ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಅನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು. |
17
|
“ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.” |
18
|
ಗಾಯಮಾಡುವವನೂ ಗಾಯಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ. |
19
|
ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು. |
20
|
ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು. |
21
|
ದೇವರು ನಿನ್ನನ್ನು ನಿಂದನೆಯಿಂದ ತಪ್ಪಿಸುವನು. ನಾಶನದಲ್ಲಿಯೂ ನೀನು ಭಯಪಡುವ ಅಗತ್ಯವಿಲ್ಲ! |
22
|
ನಾಶನಕ್ಕೂ ಬರಗಾಲಕ್ಕೂ ನೀನು ನಗುವೆ. ನೀನು ಕ್ರೂರಪ್ರಾಣಿಗಳಿಗೆ ಭಯಪಡುವ ಅಗತ್ಯವಿಲ್ಲ! |
23
|
ನೀನು ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವೆ; ಕಾಡುಮೃಗಗಳೂ ನಿನ್ನೊಂದಿಗೆ ಸಮಾಧಾನದಿಂದಿರುತ್ತವೆ. |
24
|
ನಿನ್ನ ಗುಡಾರವು ಸುರಕ್ಷಿತವಾಗಿರುವುದರಿಂದ ನೀನು ಸಮಾಧಾನದಿಂದ ಜೀವಿಸುವೆ. ನೀನು ನಿನ್ನ ಆಸ್ತಿಯನ್ನು ಲೆಕ್ಕಿಸುವಾಗ ಯಾವುದೂ ಕಳೆದು ಹೋಗಿರುವುದಿಲ್ಲ. |
25
|
ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು. |
26
|
ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ. |
27
|
“ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೋ.” |
Job 5:3 Kannada Language Bible Words basic statistical display
COMING SOON ...