1
|
“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ. |
2
|
ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ. |
3
|
ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ ನನಗೆ ನೇಮಿಸಲಾಗಿದೆ. |
4
|
ಮಲಗಿಕೊಳ್ಳುವಾಗ, ‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು. |
5
|
ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿ ಹೋಗಿದೆ. |
6
|
“ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು. |
7
|
ದೇವರೆ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ, ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ. |
8
|
ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ. ಆದರೆ ನಾನು ಅಷ್ಟರಲ್ಲೇ ಹೊರಟು ಹೋಗಿರುವೆನು. |
9
|
ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ. |
10
|
ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ. |
11
|
“ಆದ್ದರಿಂದ ನಾನು ಮೌನವಾಗಿರುವುದಿಲ್ಲ! ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರುಹೇಳುವೆನು. |
12
|
ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ? |
13
|
ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು ನಾನು ಆಲೋಚಿಸುವಾಗ, |
14
|
ನೀನು ಕನಸುಗಳಿಂದ ನನ್ನನ್ನು ಹೆದರಿಸುವೆ; ದರ್ಶನಗಳಿಂದ ನನ್ನನ್ನು ಭಯಗೊಳಿಸುವೆ. |
15
|
ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು. |
16
|
ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ! |
17
|
ದೇವರೇ, ಮನುಷ್ಯನು ಎಷ್ಟರವನು? ನೀನು ಅವನನ್ನು ಸನ್ಮಾನಿಸುವುದೇಕೆ? ಅವನ ಕಡೆಗೆ ಗಮನ ಕೊಡುವುದೇಕೆ? |
18
|
ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ? |
19
|
ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ. |
20
|
ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನಿನ್ನ ಗುರಿ ತರಬೇತಿಗಾಗಿ ನನ್ನನ್ನೇಕೆ ಉಪಯೋಗಿಸಿದೆ? ನಾನು ನಿನಗೆ ಸಮಸ್ಯೆಯಾದೆನೇ? |
21
|
ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.” |
Job 7:17 Kannada Language Bible Words basic statistical display
COMING SOON ...