1
|
ಪೆತೂವೇಲನ ಮಗನಾದ ಯೋವೇಲನು ಯೆಹೋವನಿಂದ ಈ ಸಂದೇಶವನ್ನು ಪಡೆದನು. |
2
|
ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲೈಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ! |
3
|
ಇವುಗಳನ್ನು ನೀವು ನಿಮ್ಮ ಮಕ್ಕಳಿಗೆ ತಿಳಿಸುವಿರಿ. ಮತ್ತು ನಿಮ್ಮ ಮಕ್ಕಳು ಅವರ ಮಕ್ಕಳಿಗೆ ತಿಳಿಸುವರು. ಮತ್ತು ನಿಮ್ಮ ಮೊಮ್ಮಕ್ಕಳು ಅವರ ನಂತರದ ಪೀಳಿಗೆಗೆ ತಿಳಿಸುವರು. |
4
|
ಚೂರಿ ಮಿಡಿತೆ ತಿಂದುಬಿಟ್ಟಿದ್ದನ್ನು ಗುಂಪು ಮಿಡಿತೆ ತಿಂದಿತು. ಗುಂಪು ಮಿಡಿತೆ ತಿಂದುಬಿಟ್ಟದ್ದನ್ನು ಹಾರುವ ಮಿಡಿತೆ ತಿಂದಿತು. ಹಾರುವ ಮಿಡಿತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡಿತೆ ತಿಂದುಬಿಟ್ಟಿತು. |
5
|
ಅಮಲೇರಿದವರೇ, ಎಚ್ಚರಗೊಂಡು ಅಳಿರಿ. ದ್ರಾಕ್ಷಾರಸವನ್ನು ಕುಡಿಯುವವರೇ, ಅಳಿರಿ. ಯಾಕೆಂದರೆ ನಿಮ್ಮ ಸಿಹಿಯಾದ ದ್ರಾಕ್ಷಾರಸವು ಮುಗಿದುಹೋಯಿತು. ಆ ದ್ರಾಕ್ಷಾರಸದ ಸವಿಯು ನಿಮಗೆ ಇನ್ನು ಸಿಗದು. |
6
|
ನನ್ನ ಜನಾಂಗಕ್ಕೆ ವಿರುದ್ಧವಾಗಿ ಬಲಶಾಲಿಯಾದ ದೊಡ್ಡ ರಾಜ್ಯವು ಯುದ್ಧಕ್ಕೆ ಬರುವದು. ಅವರು ಸೈನಿಕರನ್ನು ಲೆಕ್ಕಿಸಲು ಸಾಧ್ಯವಿಲ್ಲ. ಆ ಮಿಡಿತೆಗಳಂತಿರುವ ಸೈನಿಕರು ನಿಮ್ಮನ್ನು ಸೀಳಿ ಬಿಡುವರು. ಅವರ ಹಲ್ಲುಗಳು ಸಿಂಹದ ಹಲ್ಲಿನಂತಿವೆ. |
7
|
ಆ ಮಿಡಿತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶಮಾಡುವವು. ನನ್ನ ಮರಗಳ ತೊಗಟೆಗಳನ್ನು ಮಿಡಿತೆಗಳು ತಿಂದು ಬಿಡುವವು. ಅದರ ಕೊಂಬೆಗಳು ಬಿಳುಪಾಗುವವು. ಮರಗಳು ನಾಶವಾಗುವವು. |
8
|
ಮದುವೆಯಾಗಲಿಕ್ಕಿರುವ ಗಂಡನು ಸತ್ತಾಗ ವಧುವು ಬೊಬ್ಬಿಡುವಂತೆ ನೀವು ಬೊಬ್ಬಿಡಿರಿ. |
9
|
ಯಾಜಕರೇ, ಯೆಹೋವನ ಸೇವಕರೇ, ಬೊಬ್ಬಿಡಿರಿ. ಯಾಕಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು. |
10
|
ಹೊಲಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆ ಹೋಯಿತು. |
11
|
ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿರಿ. ಗೋದಿಗಾಗಿಯೂ, ಜವೆಗೋದಿಗಾಗಿಯೂ ಅಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು. |
12
|
ದ್ರಾಕ್ಷಿಬಳ್ಳಿಗಳು ಒಣಗಿ ಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿ ಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ. |
13
|
ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆ ಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ. |
14
|
ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ. |
15
|
ಶೋಕಿಸಿರಿ. ಯಾಕೆ? ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು. |
16
|
ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟು ಹೋದವು. |
17
|
ನಾವು ಬೀಜ ಬಿತ್ತಿದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ. |
18
|
ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ. |
19
|
ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು. |
20
|
ಕಾಡುಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲುಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ. |
Joel 1:19 Kannada Language Bible Words basic statistical display
COMING SOON ...