1
|
ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು. |
2
|
ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು. |
3
|
ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು. |
4
|
ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು. |
5
|
(ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು.) |
6
|
ಲಾಜರನು ಅಸ್ವಸ್ಥನಾಗಿದ್ದಾನೆ؆ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು. |
7
|
ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಜುದೇಯಕ್ಕೆ ಹಿಂತಿರುಗಿ ಹೋಗಬೇಕು” ಎಂದು ಹೇಳಿದನು. |
8
|
ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು. |
9
|
ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿ ಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು. |
10
|
ಆದರೆ ರಾತ್ರಿಯಲ್ಲಿ ನಡೆಯುವವನು ಎಡವುತ್ತಾನೆ. ಏಕೆಂದರೆ ನೋಡಿಕೊಂಡು ನಡೆಯಲು ಅವನಿಗೆ ಯಾವ ಬೆಳಕೂ ಇರುವುದಿಲ್ಲ” ಎಂದು ಉತ್ತರಕೊಟ್ಟನು. |
11
|
ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು. |
12
|
ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿದ್ದರೆ ಆರೋಗ್ಯ ಹೊಂದುವನು” ಎಂದು ಉತ್ತರಕೊಟ್ಟರು. |
13
|
ಲಾಜರನು ಸತ್ತುಹೋಗಿದ್ದಾನೆ. ಎಂಬರ್ಥದಲ್ಲಿ ಯೇಸು ಹೇಳಿದನು. ಆದರೆ ಲಾಜರನು ನಿಜವಾಗಿಯೂ ನಿದ್ರಿಸುತ್ತಿದ್ದಾನೆ ಎಂಬರ್ಥದಲ್ಲಿ ಯೇಸು ಹೇಳಿದನೆಂಬುದಾಗಿ ಶಿಷ್ಯರು ಭಾವಿಸಿಕೊಂಡರು. |
14
|
ಆದ್ದರಿಂದ ಯೇಸು, “ಲಾಜರನು ಸತ್ತುಹೋಗಿದ್ದಾನೆ. |
15
|
ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು. |
16
|
ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು. |
17
|
ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು. |
18
|
ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು. |
19
|
ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು. |
20
|
ಯೇಸು ಬರುತ್ತಿದ್ದಾನೆ ಎಂಬ ಸುದ್ದಿಯನ್ನು ಕೇಳಿ ಮಾರ್ಥಳು ಆತನನ್ನು ವಂದಿಸಲು ಹೊರಗೆ ಹೋದಳು. ಆದರೆ ಮರಿಯಳು ಮನೆಯಲ್ಲೇ ಇದ್ದಳು. |
21
|
ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ. |
22
|
ಆದರೆ ಈಗಲೂ ಸಹ ನೀನು ಏನನ್ನೇ ಕೇಳಿಕೊಂಡರೂ ದೇವರು ನಿನಗೆ ಕೊಡುತ್ತಾನೆ ಎಂಬುದು ನನಗೆ ತಿಳಿದಿದೆ” ಎಂದು ಹೇಳಿದಳು. |
23
|
ಯೇಸು, “ನಿನ್ನ ಸಹೋದರನು ಮತ್ತೆ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. |
24
|
ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು. |
25
|
ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು. |
26
|
ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ನಿಜವಾಗಿ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು. |
27
|
ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು. |
28
|
ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು. |
29
|
ಇದನ್ನು ಕೇಳಿದ ಕೂಡಲೇ ಮರಿಯಳು ಎದ್ದು ಯೇಸುವಿನ ಬಳಿಗೆ ಬೇಗಬೇಗನೆ ಹೋದಳು. |
30
|
ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ತನ್ನನ್ನು ಸಂಧಿಸಿದ ಸ್ಥಳದಲ್ಲೇ ಆತನಿದ್ದನು. |
31
|
ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು. |
32
|
ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು. |
33
|
ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು. |
34
|
ಯೇಸು ಅವರಿಗೆ, “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದು ಕೇಳಿದನು. ಅದಕ್ಕೆ ಅವರು, “ಸ್ವಾಮೀ, ಬಂದು ನೋಡು” ಎಂದರು. |
36
|
ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು. |
37
|
ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು. |
38
|
ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು. |
39
|
”ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು. |
40
|
ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು. |
41
|
ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದು ಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ. |
42
|
ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು. |
43
|
ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು. |
44
|
ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು. |
45
|
ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. |
46
|
ಆದರೆ ಕೆಲವು ಯೆಹೂದ್ಯರು ಫರಿಸಾಯರ ಬಳಿಗೆ ಹೋಗಿ, ಯೇಸು ಮಾಡಿದ್ದನ್ನು ತಿಳಿಸಿದರು. |
47
|
ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ. |
48
|
ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು. |
49
|
ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ! |
50
|
ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು. |
51
|
ಇದು ಕಾಯಫನ ಸ್ವಂತ ಆಲೋಚನೆಯಾಗಿರಲಿಲ್ಲ. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಆದ್ದರಿಂದ ಯೆಹೂದ್ಯರಿಗೋಸ್ಕರವಾಗಿ ಯೇಸು ಸಾಯುತ್ತಾನೆಂದು ಅವನು ನಿಜವಾಗಿಯೂ ಪ್ರವಾದಿಸಿದನು. |
52
|
ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು. |
53
|
ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು. |
54
|
ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು. |
55
|
ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು. |
56
|
ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು. |
57
|
ಆದರೆ ಮಹಾ ಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು. |
John 11:12 Kannada Language Bible Words basic statistical display
COMING SOON ...