1
|
ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು. |
2
|
ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು. |
3
|
ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ. |
4
|
ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು. |
5
|
ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು. |
6
|
ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು. |
7
|
ಯೇಸು ಆ ಮನುಷ್ಯನಿಗೆ, “ಹೋಗಿ ಶಿಲೋಮ್ ಕೊಳದಲ್ಲಿ (ಶಿಲೋಮ್ ಅಂದರೆ “ಕಳುಹಿಸಲ್ಪಟ್ಟವನು.”) ತೊಳೆದುಕೊ” ಎಂದು ಹೇಳಿದನು. ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು. |
8
|
ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು. “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು. |
9
|
[This verse may not be a part of this translation] |
10
|
ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. |
11
|
ಆ ಮನುಷ್ಯನು, “ಯೇಸು ಎಂಬವನು ಸ್ವಲ್ಪ ಕೆಸರನ್ನು ಮಾಡಿ ನನ್ನ ಕಣ್ಣುಗಳಿಗೆ ಹಚ್ಚಿ, ಶಿಲೋಮ್ ಕೊಳಕ್ಕೆ ಹೋಗಿ ತೊಳೆದುಕೊಳ್ಳಲು ಹೇಳಿದನು. ಅಂತೆಯೇ ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು. |
12
|
ಜನರು ಆ ಮನುಷ್ಯನಿಗೆ, “ಆ ವ್ಯಕ್ತಿ ಎಲ್ಲಿದ್ದಾನೆ?” ಎಂದು ಕೇಳಿದರು. ಆ ಮನುಷ್ಯನು, “ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು. |
13
|
ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ. |
14
|
ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್ದಿನದಲ್ಲಿ. |
15
|
ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು. |
16
|
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು. |
17
|
ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು. |
18
|
ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆ ತಾಯಿಗಳನ್ನು ಕರೆಯಿಸಿದರು. |
19
|
ಅವರು ಅವನ ತಂದೆತಾಯಿಗಳಿಗೆ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೆಂದು ನೀವು ಹೇಳುತ್ತೀರಿ. ಹಾಗಾದರೆ ಇವನಿಗೆ ಈಗ ಹೇಗೆ ಕಣ್ಣು ಕಾಣಿಸುತ್ತದೆ?” ಎಂದು ಕೇಳಿದರು. |
20
|
ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು. |
21
|
ಆದರೆ ಈಗ ಅವನಿಗೆ ಹೇಗೆ ಕಣ್ಣು ಕಾಣಿಸುತ್ತದೆಯೋ ಯಾರು ಗುಣಪಡಿಸಿದರೋ ನಮಗೆ ತಿಳಿಯದು. ಅವನನ್ನೇ ಕೇಳಿ. ಇವನು ತನ್ನ ವಿಷಯವಾಗಿ ಹೇಳುವಷ್ಟು ಪ್ರಾಯಸ್ಥನಾಗಿದ್ದಾನೆ” ಎಂದು ಉತ್ತರಕೊಟ್ಟರು. |
22
|
ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು. |
23
|
ಆದಕಾರಣವೇ ಅವನ ತಂದೆ ತಾಯಿಗಳು, “ಅವನು ಪ್ರಾಯಸ್ಥನಾಗಿದ್ದಾನೆ. ಅವನನ್ನೇ ಕೇಳಿ” ಎಂದು ಹೇಳಿದರು. |
24
|
ಯೆಹೂದ್ಯ ನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು. |
25
|
ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು. |
26
|
ಯೆಹೂದ್ಯನಾಯಕರು, “ಅವನು (ಯೇಸು) ನಿನಗೇನು ಮಾಡಿದನು? ಅವನು ನಿನ್ನ ಕಣ್ಣುಗಳನ್ನು ಹೇಗೆ ಗುಣಪಡಿಸಿದನು?” ಎಂದು ಕೇಳಿದರು. |
27
|
ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗ ಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು. |
28
|
ಯೆಹೂದ್ಯನಾಯಕರು ಕೋಪಗೊಂಡು ಆ ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ. |
29
|
ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು. |
30
|
ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು. |
31
|
ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ. |
32
|
ಹುಟ್ಟುಕುರುಡನೊಬ್ಬನನ್ನು ಯಾರಾದರೂ ಎಂದಾದರೂ ಗುಣಪಡಿಸಿರುವುದು ಇದೇ ಮೊದಲನೆ ಸಲ. |
33
|
ಆ ಮನುಷ್ಯನು (ಯೇಸು) ದೇವರಿಂದಲೇ ಬಂದಿರಬೇಕು. ಆತನು ದೇವರಿಂದ ಬಂದಿಲ್ಲದಿದ್ದರೆ, ಇಂಥ ಕಾರ್ಯಗಳನ್ನು ಮಾಡಲಾಗುತ್ತಿರಲಿಲ್ಲ” ಎಂದು ಉತ್ತರಕೊಟ್ಟನು. |
34
|
ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು. |
35
|
ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು. |
36
|
ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು. |
37
|
ಯೇಸು, “ನೀನು ಆತನನ್ನು ಈಗಾಗಲೇ ನೋಡಿರುವೆ. ಈಗ ನಿನ್ನೊಂದಿಗೆ ಮಾತಾಡುತ್ತಿರುವಾತನೇ ಮನುಷ್ಯಕುಮಾರನು” ಎಂದು ಹೇಳಿದನು. |
38
|
ಆ ಮನುಷ್ಯನು, “ಹೌದು ಪ್ರಭುವೇ, ನಾನು ನಂಬುತ್ತೇನೆ!” ಎಂದು ಉತ್ತರಕೊಟ್ಟನು. ಬಳಿಕ ಅವನು ಯೇಸುವಿಗೆ ಅಡ್ಡಬಿದ್ದು ಆರಾಧಿಸಿದನು. |
39
|
ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು. |
40
|
ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು. |
41
|
ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ನಮಗೆ ಕಣ್ಣು ಕಾಣುತ್ತದೆ؆ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು. |
John 9:1 Kannada Language Bible Words basic statistical display
COMING SOON ...