1
|
ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು. |
2
|
ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು. |
3
|
ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್ನಲ್ಲಿ ಸುನ್ನತಿಯನ್ನು ಮಾಡಿದನು. |
4
|
[This verse may not be a part of this translation] |
5
|
[This verse may not be a part of this translation] |
6
|
[This verse may not be a part of this translation] |
7
|
[This verse may not be a part of this translation] |
8
|
ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ತಮ್ಮತಮ್ಮ ಸ್ಥಳದ ಪಾಳೆಯದಲ್ಲಿ ಇದ್ದರು. |
9
|
ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ. |
10
|
ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು. |
11
|
ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು. |
12
|
ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ. |
13
|
ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು. |
14
|
ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು. |
15
|
ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು. |
Joshua 5:1 Kannada Language Bible Words basic statistical display
COMING SOON ...