1
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
2
|
“ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು. |
3
|
ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು. |
4
|
ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು. |
5
|
“ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು. |
6
|
ವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು. |
7
|
ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು. |
8
|
ರತಿ ಸಬ್ಬತ್ದಿನದಲ್ಲಿ ಆರೋನನು ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಯನ್ನು ಕ್ರಮವಾಗಿ ಯಾವಾಗಲೂ ಇಡಬೇಕು. ಇಸ್ರೇಲರೊಂದಿಗೆ ಮಾಡಲ್ಪಟ್ಟ ಒಡಂಬಡಿಕೆಯು ಶಾಶ್ವತವಾದದ್ದು. |
9
|
ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.” ದೇವರನ್ನು ಶಪಿಸಿದ ಮನುಷ್ಯನು |
10
|
ಇಸ್ರೇಲಿನ ಒಬ್ಬ ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಟಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯದಿಂದ ಅವನು ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು. |
11
|
ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.) |
12
|
ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು. |
13
|
ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
14
|
“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು. |
15
|
ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು. |
16
|
ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣ ಶಿಕ್ಷೆಯಾಗಬೇಕು. |
17
|
“ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು. |
18
|
ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು. |
19
|
“ಒಬ್ಬನು ತನ್ನ ನೆರೆಯವನನ್ನು ಅಂಗವಿಕಲನನ್ನಾಗಿ ಮಾಡಿದರೆ, ಅವನಿಗೂ ಅದೇ ರೀತಿ ಮಾಡಬೇಕು. |
20
|
ಮುರಿದ ಮೂಳೆಗೆ ಬದಲಾಗಿ ಅವನ ಮೂಳೆಯನ್ನು ಮುರಿಯಬೇಕು. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಯಬೇಕು. |
21
|
ಒಬ್ಬನು ಪಶುವೊಂದನ್ನು ಕೊಂದರೆ, ಅವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಆದರೆ ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು. |
22
|
“ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!” |
23
|
ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು. |
Leviticus 24:17 Kannada Language Bible Words basic statistical display
COMING SOON ...