1
|
ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು. |
2
|
ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು. |
3
|
ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ. |
4
|
ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು. |
5
|
ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು. |
6
|
ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. |
7
|
ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು. |
8
|
ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು. |
9
|
ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು. |
10
|
ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು. |
11
|
ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು. |
12
|
ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು. |
13
|
ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು. |
14
|
ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು. |
15
|
”ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು. |
16
|
ಮೊದಲನೆಯ ಸೇವಕನು ಬಂದು, ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು. |
17
|
ಅರಸನು ಆ ಸೇವಕನಿಗೆ, ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು. |
18
|
ಎರಡನೆಯ ಸೇವಕನು ಬಂದು, ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು. |
19
|
ಅರಸನು ಆ ಸೇವಕನಿಗೆ, ನೀನು ನನ್ನ ಐದು ಪಟ್ಟಣಗಳಿಗೆ ಅಧಿಕಾರಿಯಾಗಿರು’ ಎಂದು ಹೇಳಿದನು. |
20
|
ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ. |
21
|
ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ” ಎಂದನು. |
22
|
ಆಗ ಅರಸನು ಆ ಸೇವಕನಿಗೆ, ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ. |
23
|
ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು. |
24
|
ಬಳಿಕ ಅರಸನು ಅಲ್ಲಿದ್ದ ಜನರಿಗೆ, ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು. |
25
|
ಆ ಜನರು ಅರಸನಿಗೆ, ಸ್ವಾಮೀ, ಆ ಸೇವಕನ ಬಳಿ ಈಗಾಗಲೇ ಹತ್ತುಸಾವಿರ ರೂಪಾಯಿ ಇದೆಯಲ್ಲಾ!’ ಎಂದು ಹೇಳಿದರು. |
26
|
ಅರಸನು, ತನ್ನಲ್ಲಿರುವುದನ್ನು ಉಪಯೋಗಿಸುವವನು ಹೆಚ್ಚು ಪಡೆಯುವನು. ಆದರೆ ತನ್ನಲ್ಲಿರುವುದನ್ನು ಉಪಯೋಗಿಸದವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು. |
27
|
ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.” |
28
|
ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು. |
29
|
ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ, |
30
|
”ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ. |
31
|
ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು. |
32
|
ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು |
33
|
ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು. |
34
|
ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು. |
35
|
ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು. |
36
|
ಯೇಸು ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು. ಶಿಷ್ಯರು ತಮ್ಮ ಬಟ್ಟೆಗಳನ್ನು ರಸ್ತೆಯಲ್ಲಿ ಯೇಸುವಿನ ಮುಂದೆ ಹಾಸಿದರು. |
37
|
ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು. |
38
|
ಅವರು, “ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ! ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು. ಕೀರ್ತನೆ 118:26 |
39
|
ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು. |
40
|
ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು. |
41
|
ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು |
42
|
ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ. |
43
|
ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ, |
44
|
ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು. |
45
|
ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ, |
46
|
ಅವರಿಗೆ, “ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ”؆ ಎಂದನು. |
47
|
ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು. |
48
|
ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ. |
Luke 19:1 Kannada Language Bible Words basic statistical display
COMING SOON ...