1
|
ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು. |
2
|
ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು. |
3
|
ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ. |
4
|
ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು. |
5
|
ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ! |
6
|
ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ? |
7
|
ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು. |
8
|
ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು. |
9
|
ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು. |
10
|
ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು. |
11
|
ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು. |
12
|
ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು. |
13
|
ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು. |
14
|
ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು. |
15
|
ಆಗ ಯೇಸು ತಾನೇ ಅವರ ಹತ್ತಿರಕ್ಕೆ ಬಂದು, ಅವರ ಜೊತೆಯಲ್ಲಿ ಹೋದನು. |
16
|
(ಆದರೆ ಅವರಿಗೆ ಆತನ ಗುರುತು ಸಿಕ್ಕಲಿಲ್ಲ.) |
17
|
ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು. |
18
|
ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು. |
19
|
ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು. |
20
|
ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು. |
21
|
ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು. |
22
|
ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು. |
23
|
ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು. |
24
|
ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು. |
25
|
ಆಗ ಯೇಸು ಅವರಿಗೆ, “ನೀವು ಬುದ್ಧಿಹೀನರು ಮತ್ತು ಸತ್ಯವನ್ನು ಗ್ರಹಿಸುವುದರಲ್ಲಿ ಮಂದಗತಿಗಳು! ಪ್ರವಾದಿಗಳು ಹೇಳಿದ ಪ್ರತಿಯೊಂದನ್ನೂ ನೀವು ನಂಬಬೇಕು. |
26
|
ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು. |
27
|
ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು. |
28
|
ಅವರು ಎಮ್ಮಾಹು ಊರಿನ ಹತ್ತಿರಕ್ಕೆ ಬಂದಾಗ ಆತನು ತಾನು ಅಲ್ಲಿ ಇಳಿದುಕೊಳ್ಳದವನಂತೆ ನಟಿಸಿದನು. |
29
|
ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು. |
30
|
ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು. |
31
|
ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು. |
32
|
ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು. |
33
|
ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೂಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು, |
34
|
”ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು. |
35
|
ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು. |
36
|
ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು. |
37
|
ಆಗ ಶಿಷ್ಯರು ಬೆರಗಾದರು. ಅವರಿಗೆ ಭಯವಾಯಿತು. ಅದು ಭೂತವೇ ಇರಬೇಕೆಂದು ಅವರು ಭಾವಿಸಿದರು. |
38
|
ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ? |
39
|
ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು. |
40
|
ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು. |
41
|
ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು. |
42
|
ಅವರು ಸುಟ್ಟ ಮೀನಿನ ತುಂಡನ್ನು ಕೊಟ್ಟರು. |
43
|
ಶಿಷ್ಯರ ಕಣ್ಣೆದುರಿನಲ್ಲಿಯೇ, ಯೇಸು ಆ ಮೀನನ್ನು ತೆಗೆದುಕೊಂಡು ತಿಂದನು. |
44
|
ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು. |
45
|
ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು. |
46
|
ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು” ಎಂದು ಬರೆಯಲ್ಪಟ್ಟಿದೆ. |
47
|
[This verse may not be a part of this translation] |
48
|
[This verse may not be a part of this translation] |
49
|
ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ”ಅಂದನು. |
50
|
ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು. |
51
|
ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು. |
52
|
ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು. |
53
|
ಅವರು ಯಾವಾಗಲೂ ದೇವಾಲಯದಲ್ಲಿ ದೇವರನ್ನು ಸ್ತುತಿಸುತ್ತಿದ್ದರು. |
Luke 24:19 Kannada Language Bible Words basic statistical display
COMING SOON ...