1
|
ಒಂದಾನೊಂದು ಸಬ್ಬತ್ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು. |
2
|
ಕೆಲವು ಫರಿಸಾಯರು, “ನೀವು ಸಬ್ಬತ್ದಿನದಲ್ಲಿ ಹೀಗೆ ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು. |
3
|
ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಿದ್ದೀರಿ. |
4
|
ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ, |
5
|
”ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಹೇಳಿದನು. |
6
|
ಮತ್ತೊಂದು ಸಬ್ಬತ್ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. |
7
|
ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. |
8
|
ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ”ಎಂದು ಹೇಳಿದನು. ಅವನು ಎದ್ದುಬಂದು ನಿಂತನು. |
9
|
ಆಗ ಯೇಸು ಅವರಿಗೆ, “ಸಬ್ಬತ್ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೇ ಅಥವಾ ಕೆಟ್ಟಕಾರ್ಯವನ್ನೇ? ಜೀವವನ್ನು ಉಳಿಸುವುದೇ? ಅಥವಾ ನಾಶ ಮಾಡುವುದೇ?” ಎಂದು ಕೇಳಿದನು. |
10
|
ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಆ ಕೂಡಲೇ ಅವನ ಕೈ ವಾಸಿಯಾಯಿತು. |
11
|
ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು. |
12
|
ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು. |
13
|
ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. |
14
|
ಅವರು ಯಾರೆಂದರೆ: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, |
15
|
ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, |
16
|
ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.) |
17
|
ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು. |
18
|
ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು. |
19
|
ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು! |
20
|
ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. |
21
|
ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ. |
22
|
”ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು. |
23
|
ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು. |
24
|
”ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ. |
25
|
ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ನಗುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಡುವಿರಿ ಮತ್ತು ಅಳುವಿರಿ. |
26
|
”ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು. |
27
|
”ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ. |
28
|
ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ. |
29
|
ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನು ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ. |
30
|
ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ. |
31
|
ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. |
32
|
ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ! |
33
|
ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ! |
34
|
ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ! |
35
|
ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ. |
36
|
ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ. |
37
|
”ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು. |
38
|
ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.” |
39
|
ಯೇಸು ಅವರಿಗೆ ಈ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು. |
40
|
ಶಿಷ್ಯನು ಗುರುವಿಗಿಂತ ಮೇಲಲ್ಲ. ಆದರೆ, ಶಿಷ್ಯನು ಪೂರ್ಣ ಕಲಿತಾಗ ಗುರುವಿನಂತೆ ಆಗುವನು. |
41
|
”ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? |
42
|
ನೀನು ಅವನಿಗೆ, ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ؆ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು. |
43
|
”ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. |
44
|
”ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿ ಹಣ್ಣುಗಳನ್ನಾಗಲಿ ಪಡೆಯುವುದಿಲ್ಲ! |
45
|
ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು. |
46
|
”ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ? |
47
|
ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು. |
48
|
ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ. |
49
|
ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದು ಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.” |
Luke 6:17 Kannada Language Bible Words basic statistical display
COMING SOON ...