1
|
ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು. |
2
|
ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.” ಮಲಾಕಿ 3:1 |
3
|
“ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.” ಯೆಶಾಯ 40:3 |
4
|
ಅಂತೆಯೇ ಸ್ನಾನಿಕ ಯೋಹಾನನು ಬಂದು, ಅಡವಿಯಲ್ಲಿ ಜನರಿಗೆ, “ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ನಿಮಗೆ ಪಾಪಕ್ಷಮೆ ಆಗುವುದು” ಎಂದು ಉಪದೇಶಿಸುತ್ತಿದ್ದನು ಮತ್ತು ದೀಕ್ಷಾಸ್ನಾನ ಕೊಡುತ್ತಾ ಇದ್ದನು. |
5
|
ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು. |
6
|
ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು. |
7
|
ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ. |
8
|
ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು. |
9
|
ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು. |
10
|
ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬರುತ್ತಿರುವುದನ್ನು ಕಂಡನು. |
11
|
ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು. |
12
|
ಆಗ ದೇವರಾತ್ಮನು ಯೇಸುವನ್ನು ಅಡವಿಗೆ ನಡೆಸಿದನು. |
13
|
ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು. |
14
|
ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ, |
15
|
“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು. |
16
|
ಯೇಸು ಗಲಿಲಾಯ ಸರೋವರದ ಬಳಿ ನಡೆದು ಹೋಗುತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು. |
17
|
ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು. |
18
|
ಆಗ ಅವರು ತಮ್ಮ ಬಲೆಗಳನ್ನು ಅಲ್ಲಿಯೇ ಬಿಟ್ಟು ಆತನನ್ನು ಹಿಂಬಾಲಿಸಿದರು. |
19
|
ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು. |
20
|
ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. |
21
|
ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು. |
22
|
ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು. |
23
|
ಯೇಸು ಸಭಾಮಂದಿರದಲ್ಲಿದ್ದಾಗ, ದೆವ್ವದಿಂದ ಪೀಡಿತನಾಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. ಅವನು, |
24
|
“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧ್ದನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು. |
25
|
ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು. |
26
|
ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಅರಚುತ್ತಾ ಅವನೊಳಗಿಂದ ಹೊರಬಂದಿತು. |
27
|
ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. |
28
|
ಯೇಸುವಿನ ಸುದ್ದಿಯು ಗಲಿಲಾಯ ಪ್ರದೇಶದ ಎಲ್ಲೆಡೆಯಲ್ಲಿಯೂ ಹರಡಿತು. |
29
|
ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು. |
30
|
ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು. |
31
|
ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು. |
32
|
ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು. |
33
|
ಊರಿನ ಜನರೆಲ್ಲರೂ ಆ ಮನೆಯ ಮುಂದೆ ಒಟ್ಟುಗೂಡಿದರು. |
34
|
ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು. |
35
|
ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು. |
36
|
ತರುವಾಯ, ಸೀಮೋನ ಮತ್ತು ಅವನ ಗೆಳೆಯರು ಯೇಸುವನ್ನು ಹುಡುಕುತ್ತಾ ಹೋದರು. |
37
|
ಅವರು ಯೇಸುವನ್ನು ಕಂಡುಕೊಂಡು, “ಜನರೆಲ್ಲರೂ ನಿನ್ನನ್ನೇ ಎದುರು ನೋಡುತ್ತಿದ್ದಾರೆ!” ಎಂದು ಹೇಳಿದರು. |
38
|
ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು. |
39
|
ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. |
40
|
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು. |
41
|
ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು. |
42
|
ಆ ಕೂಡಲೇ ಅವನಿಗೆ ಗುಣವಾಯಿತು. |
43
|
[This verse may not be a part of this translation] |
44
|
[This verse may not be a part of this translation] |
45
|
ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು. |
Mark 1:1 Kannada Language Bible Words basic statistical display
COMING SOON ...