1
|
“ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ. |
2
|
ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು. |
3
|
“ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ? |
4
|
ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯಲೇ? ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ. |
5
|
ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು. |
6
|
“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ. |
7
|
“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು. |
8
|
ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ. |
9
|
“ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೊ? |
10
|
ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೊ? |
11
|
ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ. |
12
|
“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ. |
13
|
“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕ ರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ. |
14
|
ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು. |
15
|
“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ. |
16
|
ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ. |
17
|
ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ. |
18
|
ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. |
19
|
ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು. |
20
|
ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ. |
21
|
“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು. |
22
|
ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು. |
23
|
ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು. |
24
|
“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ. |
25
|
ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ. |
26
|
“ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು. |
27
|
ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.” |
28
|
ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು. |
29
|
ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು. |
Matthew 7:22 Kannada Language Bible Words basic statistical display
COMING SOON ...