1
|
ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು. |
2
|
ಯಾಜಕರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಯೆರಿಕೋದವರು ಗೋಡೆ ಕಟ್ಟಿದರು, ಯೆರಿಕೋದವರು ಕಟ್ಟಿ ನಿಲ್ಲಿಸಿದ್ದ ಸ್ಥಳದಿಂದ ಇಮ್ರಿಯ ಮಗನಾದ ಜಕ್ಕೂರನು ಗೋಡೆ ಕಟ್ಟಿದನು. |
3
|
ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣೆಗಳನ್ನಿಟ್ಟು ಭದ್ರಪಡಿಸಿದರು. |
4
|
ಇವನ ನಂತರ ಊರೀಯನ ಮಗನಾದ ಮೆರೇಮೋತನು ಗೋಡೆಯನ್ನು ಕಟ್ಟಿದನು. (ಊರೀಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ಯನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ಯನು ಮೆಷೇಜಬೇಲನ ಮಗ.) ಈ ಗೋಡೆಯ ನಂತರದ ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು. |
5
|
ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ. |
6
|
ಯೋಯಾದ ಮತ್ತು ಮೆಷುಲ್ಲಾಮ್ ಹಳೆಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು, ಕದಗಳನ್ನು, ಅಗುಳಿಗಳನ್ನು ಜೋಡಿಸಿದರು. |
7
|
ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು. |
8
|
ಹರ್ಹಯನ ಮಗನಾದ ಉಜ್ಜೀಯೇಲನು ಅಲ್ಲಿಂದಾಚೆಗೆ ಕಟ್ಟಿದನು. ಉಜ್ಜೀಯೇಲನು ಅಕ್ಕಸಾಲಿಗನಾಗಿದ್ದನು; ಹನನ್ಯನು ಸುಗಂಧದ್ರವ್ಯವನ್ನು ತಯಾರು ಮಾಡುತ್ತಿದ್ದನು. ಇವರು, “ಅಗಲಗೋಡೆ” ಯವರೆಗೂ ಜೆರುಸಲೇಮ್ ಗೋಡೆಯನ್ನು ಕಟ್ಟಿದರು. |
9
|
ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು. |
10
|
ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು. |
11
|
ಹಾರೀಮನ ಮಗನಾದ ಮಲ್ಕೀಯನು, ಪಹತ್ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು. |
12
|
ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು. |
13
|
ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನೂ ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣಿ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು. |
14
|
ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲಕನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. |
15
|
ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿ ಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು. |
16
|
ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು. |
17
|
ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲಕನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು. |
18
|
ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿ ಮಾಡಿದರು. ಬಿನೈಹೇನಾದಾದನ ಮಗ. |
19
|
ಮಿಚ್ಪದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು. |
20
|
ಚಬ್ಬೈಯ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು. |
21
|
ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು. |
22
|
ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು. |
23
|
ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೇ ಮುಂದಿದ್ದ ಗೋಡೆಯನ್ನು ಕಟ್ಟಿದನು. |
24
|
ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು. |
25
|
ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದುವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿತ್ತು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚಿನಿಂದ ಮುಂದುವರಿಸಿದನು. |
26
|
ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು. |
27
|
ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್ಗೋಡೆಯ ತನಕ ಮುಂದುವರಿಸಿದರು. |
28
|
ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು. |
29
|
ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರು ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. |
30
|
ಶೆಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಲಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು. |
31
|
ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿತ್ತು. ಮೂಲೆಗೋಡೆಯ ಮೇಲಿರುವ ಕೋಣಿಯ ತನಕದ ಭಾಗವನ್ನು ಅಕ್ಕಸಾಲಿಗನಾದ ಮಲ್ಕೀಯನು ರಿಪೇರಿ ಮಾಡಿದನು. |
32
|
ಅಕ್ಕಸಾಲಿಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣಿಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು. |
Nehemiah 3:1 Kannada Language Bible Words basic statistical display
COMING SOON ...