1
|
ರಿಕೋ ಪಟ್ಟಣದ ಆಚೆಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಯರ ಬಯಲಿನಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ: |
2
|
“ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು. |
3
|
ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು. |
4
|
ನೀವು ಲೇವಿಯರಿಗೆ ಕೊಡುವ ಹುಲ್ಲುಗಾವಲುಗಳು ಅಂದರೆ ಪಟ್ಟಣಗಳ ಸುತ್ತಲೂ ಇರುವ ಹುಲ್ಲುಗಾವಲುಗಳು ಪಟ್ಟಣದ ಗೋಡೆಯ ಹೊರಗೆ ಎಲ್ಲಾ ದಿಕ್ಕಿನಲ್ಲೂ ಒಂದು ಸಾವಿರ ಮೊಳ ವಿಸ್ತರಿಸಬೇಕು. |
5
|
ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು. |
6
|
ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು. |
7
|
ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ. |
8
|
ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.” |
9
|
ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
10
|
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ |
11
|
ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. |
12
|
ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು. |
13
|
[This verse may not be a part of this translation] |
14
|
[This verse may not be a part of this translation] |
15
|
ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರೇಲನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯ ಹೊಂದಬಹುದು. |
16
|
“ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. |
17
|
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು. |
18
|
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ವಸ್ತುವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ಕೊಲೆಗಾರ. ಅವನಿಗೆ ಮರಣಶಿಕ್ಷೆಯಾಗಬೇಕು. ಲೇವಿಯರ ಪಟ್ಟಣಗಳು |
19
|
ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು. |
20
|
“ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ |
21
|
ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ. |
22
|
“ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ, |
23
|
ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ |
24
|
ಸಭೆಯವರು ಕೊಂದವನಿಗೂ ಕೊಲ್ಲಲ್ಪಟ್ಟವನಿಗೂ ಈ ನಿಯಮಗಳಿಗನುಸಾರವಾಗಿ ನ್ಯಾಯತೀರ್ಪು ನೀಡಬೇಕು. |
25
|
ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪ ಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. |
26
|
[This verse may not be a part of this translation] |
27
|
[This verse may not be a part of this translation] |
28
|
ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು. |
29
|
ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು. |
30
|
ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು. |
31
|
“ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. |
32
|
ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು. |
33
|
“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ. |
34
|
ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.” |
Numbers 35:8 Kannada Language Bible Words basic statistical display
COMING SOON ...