1
|
ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ. |
2
|
ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು. |
3
|
ಕೆಡುಕರಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೊ ಸಮಾಧಾನದಿಂದಿರುವರು. |
4
|
ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು. |
5
|
ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ. |
6
|
ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೊ ಜನರನ್ನು ಅಪಾಯದಿಂದ ರಕ್ಷಿಸುತ್ತವೆ. |
7
|
ದುರ್ಜನರು ಸರ್ವನಾಶವಾಗುವರು; ಆದರೆ ಸಜ್ಜನರ ಕುಟುಂಬವು ಸ್ಥಿರವಾಗಿರುವುದು. |
8
|
ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು. |
9
|
ಪ್ರಮುಖನಂತೆ ವರ್ತಿಸುತ್ತಾ ಆಹಾರವಿಲ್ಲದಿರುವುದಕ್ಕಿಂತ ಪ್ರಮುಖನಲ್ಲದವನಾಗಿದ್ದು ಸೇವಕನಂತೆ ಇರುವುದು ಮೇಲು. |
10
|
ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ. |
11
|
ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು. |
12
|
ಕಳವು ಮಾಲುಗಳಲ್ಲಿ ದುಷ್ಟರಿಗೆ ಆಸೆ. ಒಳ್ಳೆಯವರಿಗಾದರೊ ತಮ್ಮಲ್ಲಿರುವುದನ್ನು ಬೇರೆಯವರಿಗೆ ಕೊಡಬೇಕೆಂಬ ಆಸೆ. |
13
|
ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು. |
14
|
ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು. |
15
|
ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೊ ಉಪದೇಶಕ್ಕೆ ಕಿವಿಗೊಡುತ್ತಾನೆ. |
16
|
ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು. |
17
|
ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು. |
18
|
ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ. |
19
|
ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ. |
20
|
ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು. |
21
|
ಸಜ್ಜನರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ದುರ್ಜನರಿಗೆ ಅನೇಕ ತೊಂದರೆಗಳಿರುತ್ತವೆ. |
22
|
ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ. |
23
|
ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ. |
24
|
ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು. |
25
|
ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ. |
26
|
ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು. |
27
|
ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ. |
28
|
ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ. |
Proverbs 12:1 Kannada Language Bible Words basic statistical display
COMING SOON ...