1
|
ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು. |
2
|
ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು! |
3
|
ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ. |
4
|
ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು. |
5
|
ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ. |
6
|
ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ. |
7
|
ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ. |
8
|
ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು. |
9
|
ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು. |
10
|
ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ. |
11
|
ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ. |
12
|
ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ. |
13
|
ಮೂಢನಾದ ಮಗನು ತಂದೆಗೆ ಹಾನಿ; ವಾದಿಸುವ ಹೆಂಡತಿಯು ಸೋರುವ ಮೇಲ್ಛಾವಣಿಯಂತಿದ್ದಾಳೆ. |
14
|
ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳುವರು. ವಿವೇಕಿಯಾದ ಹೆಂಡತಿಯಾದರೊ ಯೆಹೋವನಿಂದ ಬಂದ ಉಡುಗೊರೆ. |
15
|
ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ. |
16
|
ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು. |
17
|
ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನಿಗೆ ಮರುಪಾವತಿ ಮಾಡುವನು. |
18
|
ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು. |
19
|
ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು. |
20
|
ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೋ. ಆಗ ನೀನು ಜ್ಞಾನಿಯಾಗುವೆ. |
21
|
ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು. |
22
|
ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು. |
23
|
ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು. |
24
|
ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ. |
25
|
ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು. |
26
|
ತಂದೆಗೆ ಹೊಡೆಯುವವನೂ ತಾಯಿಯನ್ನು ಓಡಿಸುವವನೂ ತನಗೇ ನಾಚಿಕೆಯನ್ನು ಮತ್ತು ಅವಮಾನವನ್ನು ತಂದುಕೊಳ್ಳುವನು. |
27
|
ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ. |
28
|
ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ. |
29
|
ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು. |
Proverbs 19:1 Kannada Language Bible Words basic statistical display
COMING SOON ...