1
|
ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ. |
2
|
ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ. |
3
|
ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢನಾದರೊ ಜಗಳಕ್ಕೇ ಆತುರ ಪಡುವನು. |
4
|
ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ. |
5
|
ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ವಿವೇಕಿಯು ಅರ್ಥಮಾಡಿಕೊಳ್ಳಬಲ್ಲನು. |
6
|
ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ. |
7
|
ಸದ್ದರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು. |
8
|
ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು. |
9
|
ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ? |
10
|
ಮೋಸದ ತಕ್ಕಡಿಗಳೂ ಮೋಸದ ಅಳತೆ ಮಾಪಕಗಳೂ ಯೆಹೋವನಿಗೆ ಅಸಹ್ಯ. |
11
|
ಬಾಲಕನೊಬ್ಬನು ಒಳ್ಳೆಯವನೊ ಕೆಟ್ಟವನೊ ಎಂಬುದು ಅವನ ನಡತೆಯಿಂದಲೇ ತೋರಿಬರುವುದು. |
12
|
ನಮಗೆ ನೋಡಲು ಕಣ್ಣುಗಳಿವೆ. ಕೇಳಲು ಕಿವಿಗಳಿವೆ. ಅವುಗಳನ್ನು ನಮಗೋಸ್ಕರ ಉಂಟುಮಾಡಿದವನು ಯೆಹೋವನೇ. |
13
|
ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು. |
14
|
ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು. |
15
|
ಬಂಗಾರಕ್ಕಿಂತಲೂ ಮಾಣಿಕ್ಯದ ಸಮೃದ್ಧಿಗಿಂತಲೂ ಜ್ಞಾನದ ಮಾತುಗಳನ್ನಾಡುವ ತುಟಿಗಳು ಅಮೂಲ್ಯವಾಗಿವೆ. |
16
|
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನು ಕಳೆದುಕೊಳ್ಳುವೆ. |
17
|
ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು. |
18
|
ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು. |
19
|
ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ. |
20
|
ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನ ಜೀವಿತವು ಕತ್ತಲೆಯಲ್ಲಿ ಆರಿಹೋದ ದೀಪದಂತೆ ಕೊನೆಗೊಳ್ಳುವುದು. |
21
|
ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ. |
22
|
“ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು. |
23
|
ಯೆಹೋವನಿಗೆ ಅನ್ಯಾಯದ ಅಳತೆ ಮಾಪಕವು ಅಸಹ್ಯ; ಮೋಸದ ತಕ್ಕಡಿಗಳು ಅಪರಾಧ. |
24
|
ಭವಿಷ್ಯತ್ತನ್ನು ನಿರ್ಣಯಿಸುವವನು ಯೆಹೋವನೇ ಆಗಿರುವಾಗ, ತನ್ನ ಭವಿಷ್ಯತ್ತನ್ನು ಅರ್ಥಮಾಡಿಕೊಳ್ಳಲು ಯಾರಿಗೆ ಸಾಧ್ಯ? |
25
|
ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ. |
26
|
ಜ್ಞಾನಿಯಾದ ರಾಜನಿಗೆ ಕೆಡುಕರು ಯಾರೆಂಬುದು ಗೊತ್ತಾಗುವುದು; ಅವನು ಅವರನ್ನು ದಂಡಿಸುವನು. |
27
|
ಮನುಷ್ಯನ ಆತ್ಮ ಯೆಹೋವನ ದೀಪವಾಗಿದೆ; ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ. |
28
|
ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು. |
29
|
ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ. |
30
|
ದಂಡನೆಯು ತಪ್ಪನ್ನು ನಿಲ್ಲಿಸುತ್ತದೆ; ನೋವು ವ್ಯಕ್ತಿಯನ್ನು ಬದಲಾಯಿಸುತ್ತದೆ. |
Proverbs 20:1 Kannada Language Bible Words basic statistical display
COMING SOON ...