1
|
ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ. |
2
|
ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ. |
3
|
ಕುದುರೆಗೆ ಚಬುಕಬೇಕು. ಹೇಸರಕತ್ತೆಗೆ ಕಡಿವಾಣಬೇಕು. ಮೂಢನಿಗೆ ಹೊಡೆತಬೇಕು. |
4
|
ಮೂಢನಿಗೆ ಅವನ ಮೂರ್ಖತನದ ಮಟ್ಟದಲ್ಲಿ ಉತ್ತರ ಕೊಡಬೇಡ; ಇಲ್ಲವಾದರೆ ನೀನೂ ಅವನಂತಾಗುವೆ. |
5
|
ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು. |
6
|
ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು. |
7
|
ಮೂಢನು ಜ್ಞಾನದ ಮಾತನ್ನು ಹೇಳಲು ಮಾಡುವ ಪ್ರಯತ್ನವು, ಕುಂಟನು ನಡೆಯಲು ಮಾಡುವ ಪ್ರಯತ್ನದಂತಿದೆ. |
8
|
ಮೂಢನಿಗೆ ತೋರುವ ಗೌರವ, ಕವಣೆಯಲ್ಲಿರುವ ಕಲ್ಲಿನಷ್ಟೇ ಕೆಟ್ಟದ್ದು. |
9
|
ಮೂಢನು ಜ್ಞಾನೋಕ್ತಿಯನ್ನು ಬಳಸಲು ಮಾಡುವ ಪ್ರಯತ್ನವು ಕುಡುಕನೊಬ್ಬನು ಮುಳ್ಳುಕೊಂಬೆಯೊಂದನ್ನು ತನ್ನ ಕೈಯಲ್ಲಿ ಝಳಪಿಸುವಂತಿರುವುದು. |
10
|
ಮೂಢನನ್ನಾಗಲಿ ಕುಡುಕನನ್ನಾಗಲಿ ಕೂಲಿಗೆ ನೇಮಿಸಿಕೊಳ್ಳುವವನು ಹಾದುಹೋಗುವವರಿಗೆಲ್ಲ ಗಾಯ ಮಾಡುವ ಬಿಲ್ಲುಗಾರನಂತಿರುವನು. |
11
|
ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು. |
12
|
ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು. |
13
|
“ನಾನು ನನ್ನ ಮನೆಯಿಂದ ಹೊರಗೆ ಹೋಗಲಾರೆ. ಬೀದಿಯಲ್ಲಿ ಸಿಂಹವಿದೆ” ಎನ್ನುತ್ತಾನೆ ಸೋಮಾರಿ. |
14
|
ಬಾಗಿಲು ತಿರುಗುಣಿಯ ಮೇಲೆ ಸುತ್ತುವಂತೆ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುವನು. |
15
|
ಸೋಮಾರಿಯು ತಟ್ಟೆಯಲ್ಲಿರುವ ಊಟವನ್ನು ತಿನ್ನುವುದಕ್ಕೂ ಬಹು ಆಯಾಸಪಡುವನು. |
16
|
ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು. |
17
|
ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ. |
18
|
[This verse may not be a part of this translation] |
19
|
[This verse may not be a part of this translation] |
20
|
ಸೌದೆ ಇಲ್ಲದಿದ್ದರೆ ಬೆಂಕಿಯು ಆರಿಹೋಗುವುದು. ಅಂತೆಯೇ ಹುರುಳಿಲ್ಲದ ವಾಗ್ವಾದ ನಿಂತು ಹೋಗುವುದು. |
21
|
ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು. |
22
|
ಹರಟೆಮಾತು ಜನರಿಗೆ ಪ್ರಿಯ. ಅವರಿಗೆ ಅದು ಒಳ್ಳೆಯ ಆಹಾರವನ್ನು ತಿಂದಂತಿರುವುದು. |
23
|
ಕೆಟ್ಟ ಆಲೋಚನೆಯನ್ನು ಅಡಗಿಸಿಡುವ ಕನಿಕರದ ಮಾತುಗಳು ಕಡಿಮೆ ಬೆಲೆಯ ಮಡಿಕೆಯ ಮೇಲಿನ ಬೆಳ್ಳಿಯ ಲೇಪನದಂತಿವೆ. |
24
|
ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು. |
25
|
ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ. |
26
|
ದ್ವೇಷವು ತನ್ನನ್ನು ಮೋಸದಿಂದ ಮರೆಮಾಡಿಕೊಳ್ಳುತ್ತದೆ. ಆದರೆ ಅವನು ಕೀಳಾದವನು; ಕೊನೆಯಲ್ಲಿ, ಅವನ ಕೆಟ್ಟಕಾರ್ಯಗಳನ್ನು ಜನರೆಲ್ಲರೂ ನೋಡುವರು. |
27
|
ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು. |
28
|
ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕಪಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು. |
Proverbs 26:1 Kannada Language Bible Words basic statistical display
COMING SOON ...