1
|
ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು. |
2
|
ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ. |
3
|
ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹುಭಾರ. |
4
|
ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ. |
5
|
ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ. |
6
|
ಸ್ನೇಹಿತನಿಂದಾಗುವ ಗಾಯಗಳು ಸಹಾಯಕರ. ಶತ್ರುವಿನ ಮುತ್ತುಗಳಾದರೊ ಮೋಸಕರ. |
7
|
ಹೊಟ್ಟೆ ತುಂಬಿದವನು ಜೇನುತುಪ್ಪವನ್ನೂ ತಿರಸ್ಕರಿಸುವನು;ವೇ ಇಲ್ಲ.ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ |
8
|
ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು. |
9
|
ಪರಿಮಳ ತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು. |
10
|
ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ. |
11
|
ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ. |
12
|
ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟು ಹೋಗುವನು. ಮೂಢನಾದರೊ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು. |
13
|
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ. |
14
|
ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು. |
15
|
ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು. |
16
|
ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ. |
17
|
ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು. |
18
|
ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು. |
19
|
ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು. |
20
|
ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ. |
21
|
ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು. |
22
|
ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ. |
23
|
ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ. |
24
|
ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ. |
25
|
ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು. |
26
|
ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು. |
27
|
ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು. |
Proverbs 27:1 Kannada Language Bible Words basic statistical display
COMING SOON ...