1
|
ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು. |
2
|
ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು. |
3
|
ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು. |
4
|
ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು. |
5
|
ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ. |
6
|
ಕೆಡುಕರು ತಮ್ಮ ಪಾಪದಿಂದಲೇ ಸಿಕ್ಕಿಕೊಳ್ಳುವರು. ಒಳ್ಳೆಯವರಾದರೊ ಸಂತೋಷದಿಂದ ಹಾಡುವರು. |
7
|
ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೊ ಬಡವರನ್ನು ಲಕ್ಷಿಸುವುದಿಲ್ಲ. |
8
|
ದುರಾಭಿಮಾನಿಗಳು ಇಡೀ ಪಟ್ಟಣವನ್ನೇ ಬೇಸರಗೊಳಿಸುವರು. ಜ್ಞಾನಿಗಳಾದರೋ ಕೋಪದ ಜ್ವಾಲೆಗಳನ್ನು ನಂದಿಸುವರು. |
9
|
ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ. |
10
|
ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು. |
11
|
ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು; ಆದರೆ ಜ್ಞಾನಿಯು ತನ್ನನ್ನು ಹತೋಟಿಯಲ್ಲಿಟ್ಟುಕೊಳ್ಳುವನು. |
12
|
ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಆಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು. |
13
|
ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ. |
14
|
ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು. |
15
|
ಶಿಕ್ಷೆಯು ಮತ್ತು ತಿದ್ದುಪಡಿಯು ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಶಿಸ್ತುಪಡಿಸಿಲ್ಲದ ಯೌವನಸ್ಥನು ತನ್ನ ತಾಯಿಯನ್ನು ನಾಚಿಕೆಗೆ ಗುರಿಪಡಿಸುತ್ತಾನೆ. |
16
|
ಕೆಡುಕರು ದೇಶವನ್ನು ಆಳುತ್ತಿದ್ದರೆ, ಎಲ್ಲೆಲ್ಲೂ ಪಾಪವಿರುವುದು. ಆದರೆ ಒಳ್ಳೆಯವರಿಗೆ ಕೊನೆಯಲ್ಲಿ ಜಯವಾಗುವುದು. |
17
|
ನಿನ್ನ ಮಗನನ್ನು ತಿದ್ದಿ ಸರಿಪಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು. |
18
|
ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು. |
19
|
ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ. |
20
|
ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ. |
21
|
ನೀನು ಚಿಕ್ಕಂದಿನಿಂದಲೇ ಗುಲಾಮನನ್ನು ಕೋಮಲನಾಗಿ ಸಾಕಿದರೆ, ಕೊನೆಯಲ್ಲಿ ಅವನು ಮೊಂಡನಾಗಿರುವನು. |
22
|
ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು. |
23
|
ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು. |
24
|
ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ. |
25
|
ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು. |
26
|
ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ. |
27
|
ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ. ಕೆಡುಕರು ಯಥಾರ್ಥರನ್ನು ದ್ವೇಷಿಸುವರು. |
Proverbs 29:1 Kannada Language Bible Words basic statistical display
COMING SOON ...