1
|
ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ? |
2
|
ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು. |
3
|
ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು? |
4
|
ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ. |
5
|
ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಅತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು. |
6
|
ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ. |
7
|
ಯಾಕಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ. ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು. |
Psalms 11:1 Kannada Language Bible Words basic statistical display
COMING SOON ...