1
|
ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು. |
2
|
ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ. |
3
|
ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು. |
4
|
ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು. |
5
|
ದೇವರು ಇಂತೆನ್ನುವನು: “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿ ಬನ್ನಿರಿ” ಎಂದು ಆಜ್ಞಾಪಿಸುವನು. |
6
|
ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು. |
7
|
ದೇವರು ಇಂತೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು! |
8
|
ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗ ಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ. |
9
|
ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ. |
10
|
ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ವ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳು ನನ್ನವೇ. |
11
|
ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ. |
12
|
ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ. |
13
|
ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?” |
14
|
ಕೃತಜ್ಞತಾ ಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ. |
15
|
ದೇವರು ಇಂತೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.” |
16
|
ದೇವರು ದುಷ್ಟರಿಗೆ ಇಂತೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ. |
17
|
ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ? |
18
|
ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ. |
19
|
ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ. |
20
|
ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ. |
21
|
ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು! |
22
|
ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು! |
23
|
ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು. |
Psalms 50:6 Kannada Language Bible Words basic statistical display
COMING SOON ...