1
|
ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ವಿಜ್ಞಾಪನೆಗೆ ಕಿವಿಗೊಡು. |
2
|
ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು. ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿಕೊಳ್ಳುವೆನು. |
3
|
ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು. |
4
|
ನನ್ನ ಹೃದಯ ಬಡಿತವು ಮಿತಿಮೀರಿದೆ; ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ. |
5
|
ನಾನು ಭಯದಿಂದ ನಡುಗುತ್ತಿದ್ದೇನೆ. ನಾನು ದಿಗಿಲುಗೊಂಡಿದ್ದೇನೆ. |
6
|
ಆಹಾ, ನನಗೆ ಪಾರಿವಾಳದಂತೆ ರೆಕ್ಕೆಗಳಿದ್ದರೆ, ನಾನು ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು. |
7
|
ನಾನು ಅರಣ್ಯದಲ್ಲಿ ಬಹು ದೂರಕ್ಕೆ ಹಾರಿ ಹೋಗುತ್ತಿದ್ದೆನು. |
8
|
ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು. |
9
|
ನನ್ನ ಒಡೆಯನೇ, ಅವರ ಸುಳ್ಳುಗಳನ್ನು ನಿಲ್ಲಿಸು. ಈ ಪಟ್ಟಣದಲ್ಲಿ ಹಿಂಸೆಯೂ ಕಲಹವೂ ಕಾಣುತ್ತಿದೆ. |
10
|
ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ. |
11
|
ಬೀದಿಗಳಲ್ಲಿ ಅಪರಾಧಗಳು ಅತಿಯಾಗಿವೆ. ಜನರು ಎಲ್ಲೆಲ್ಲಿಯೂ ಸುಳ್ಳು ಹೇಳಿ ಮೋಸಮಾಡುತ್ತಿದ್ದಾರೆ. |
12
|
ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುಗಳಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು. |
13
|
ಆದರೆ ನನಗೆ ಕೇಡು ಮಾಡುತ್ತಿರುವವನು ನನ್ನ ಸಂಗಡಿಗನಾದ ನೀನೇ; ನನ್ನ ಸಹೋದ್ಯೋಗಿಯೂ ನನ್ನ ಸ್ನೇಹಿತನೂ ಆದ ನೀನೇ. |
14
|
ನಾವು ಜನಸಮೂಹದ ನಡುವೆ ದೇವಾಲಯಕ್ಕೆ ಹೋಗುವಾಗ, ಗುಟ್ಟಾದ ವಿಷಯಗಳನ್ನು ಮಾತಾಡುತ್ತಿದ್ದೆವಲ್ಲಾ! |
15
|
ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು. |
16
|
ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು. ಯೆಹೋವನು ನನಗೆ ಉತ್ತರ ಕೊಡುವನು. |
17
|
ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು! |
18
|
ನಾನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದೇನೆ. ಆದರೆ ಪ್ರತಿಸಲವೂ ದೇವರು ನನ್ನನ್ನು ಪಾರುಮಾಡಿ, ಸುರಕ್ಷಿತವಾಗಿ ಬರಮಾಡಿದನು. |
19
|
ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು. |
20
|
ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ. |
21
|
ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು. |
22
|
ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ. |
23
|
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು. |
Psalms 55:1 Kannada Language Bible Words basic statistical display
COMING SOON ...